ರಾಜ್ಯ

ಮಲ್ಲಿಕಾರ್ಜುನ ಖರ್ಗೆ ಅವರ ಜಿಲ್ಲೆಯಲ್ಲಿಯೇ ಯಾಕೆ ಈ ಸ್ಕ್ಯಾಮ್ ಆಗುತ್ತಿದೆ: ಜೋಷಿ ಪ್ರಶ್ನೆ

ಹುಬ್ಬಳ್ಳಿ : ನಮ್ಮ ಸರ್ಕಾರದಲ್ಲಿ ಪಿಎಸ್‍ಐ ಹಗರಣ ಹೊರಬಂತು. ನಾವು ಐಜಿ ಅವರನ್ನೆ ಜೈಲಿಗೆ ಕಳುಹಿಸಿದೆವು. ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಾಕಷ್ಟು ತಂತ್ರಜ್ಞಾನ ಬಂದಿದೆ. ಆದರೆ, ಯಾಕೆ ಹೀಗೆ ಆಯಿತು. ಅದು ಮಲ್ಲಿಕಾರ್ಜುನ ಖರ್ಗೆ ಅವರ ಜಿಲ್ಲೆಯಲ್ಲಿಯೇ ಯಾಕೆ ಈ ಸ್ಕ್ಯಾಮ್ ಆಗುತ್ತಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮಗಳು ಕಲಬುರಗಿಯಲ್ಲೇ ಯಾಕೆ ಆಗುತ್ತಿದೆ ಎಂಬುವುದನ್ನು ತಿಳಸಬೇಕು ಎಂದರು. ಕಾಂಗ್ರೆಸ್ ಪಾರ್ಟಿ ಗೊಂದಲದಿಂದ ರಾಜ್ಯದ ಜನ ಅಂತಂತ್ರ ವಾಗಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ . ಇನ್ನೂ ಎರಡು ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ. ಉಪ ಮುಖ್ಯಮಂತ್ರಿ ಶಿವಕುಮಾರ್ ಬಿಟ್ಟು ಸಭೆ ಮಾಡುವ ಸ್ಥಿತಿಗೆ ಸಿದ್ದರಾಮಯ್ಯ ತಲುಪಿದ್ದಾರೆ. ಇದು ರಾಜಕೀಯ ಹೈಡ್ರಾಮಾ ಕಾಂಗ್ರೆಸಿನಲ್ಲಿ ನಿತ್ಯ ಭಿನ್ನಮತ ಹೆಚ್ಚಾಗುತ್ತಿದೆ ಅಧಿಕಾರಕ್ಕಾಗಿ ಒಳ ಜಗಳ ನಡೆಯುತ್ತಿದ್ದು ಇದನ್ನು ಡೈವರ್ಟ್ ಮಾಡಲು ಹುಲಿ ಉಗುರು ಪೆಂಡೆಂಟ್ ವಿಚಾರ ತಂದಿದ್ದಾರೆ ಎಂದು ಟಾಂಗ್ ನೀಡಿದರು.

ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾವಾಗಿದೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಜಗಳ ತಾರಕ್ಕೇರಿದೆ ಇದನ್ನು ಡೈವರ್ಟ್ ಮಾಡಲು ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಈ ಸರ್ಕಾರವನ್ನು ತೆಗೆಯಲು ಬಿಜೆಪಿ ಯಾವುದೇ ಚಿಂತನೆ ಮಾಡಿಲ್ಲ. ಜನ ಕಾಂಗ್ರೆಸ್‍ಗೆ ಅಧಿಕಾರ ಕೊಟ್ಟಿದ್ದಾರೆ ಐದು ವರ್ಷ ನಡೆಸಲಿ. ಆದರೆ, ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಾಲಿಶ ಹೇಳಿಕೆ ನೀಡೋದು ಬಿಡಬೇಕು. ಐದಾರು ಸ್ಥಾನಗಳು ಕಡಿಮೆ ಇದ್ದರೆ ಸರ್ಕಾರ ರಚನೆ ಬಗ್ಗೆ ಯೋಚನೆ ಮಾಡಬಹುದು. ಆದ್ರೆ 70 ಶಾಸಕರನ್ನು ಕರೆದುಕೊಂಡು ಯಾರು ಸರ್ಕಾರ ರಚನೆ ಮಾಡಲು ಯೋಚನೆ ಮಾಡುತ್ತಿದ್ದಾರೆ.

ಇದು ಸಾಧ್ಯನಾ ಎಂದ ಅವರು ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಪ್ರಾಮುಖ್ಯತೆ ಕಡಿಮೆ ಮಾಡಲು ಸಿದ್ದರಾಮಯ್ಯ ಡ್ರಾಮಾ ನಡೆಸಿದ್ದಾರೆ. ಇನ್ನೂ ಎರಡುವರೆ ವರ್ಷಕ್ಕೆ ಮತ್ತು ಲೋಕಸಭಾ ಚುನಾವಣೆಗೆ ಬಳಿ ಉಪ ಮುಖ್ಯಮಂತ್ರಿ ಡಿಕೆಶಿಗೆ ಅಕಾರ ಬಿಟ್ಟುಕೊಡಬೇಕು ಅಂತ ಸಿದ್ದರಾಮಯ್ಯ ಈ ನಾಟಕ ನಡೆಸಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಭಿಮಾನ ಕರ್ನಾಟಕ ಅಂತ ಮಾತನಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರವಾಗಿ ಯಾವುದೇ ಸಹಕಾರ ನೀಡುತ್ತಿಲ್ಲ . ಕೇಂದ್ರ ಜಲ ಸಂಪನ್ಮೂಲಗಳ ವಿಚಾರದಲ್ಲಿ ಅವರು ಸಹಕಾರ ಕೊಟ್ಟಿಲ್ಲ ಇದನ್ನು ಅವರು ಎದೆ ಮುಟ್ಟಿಕೊಂಡು ಹೇಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸ್ಪಷ್ಟನೆ ಕೇಳಿದರು.

ಕುಚ್ವಿತ ಬುದ್ಧಿ ಇರಬಾರದು:
ಮಾಜಿ ಸಿಎಂ ಬೊಮ್ಮಾಯಿ ಅನಾರೋಗ್ಯದ ಬಗ್ಗೆ ಶಾಸಕ ಎನ್ ಎಚ್ ಕೋನರೆಡ್ಡಿ ಅಪಹಾಸ್ಯ ವಿಚಾರ ಕುರಿತು ಸಹ ಪ್ರತಿಕ್ರಿಯೆ ನೀಡಿದ ಅವರು, ಅನಾರೋಗ್ಯ ಮತ್ತು ಸಾವಿನ ವಿಚಾರದಲ್ಲಿ ವ್ಯಕ್ತಿ ಯಾರೇ ಇರಲಿ ಈ ರೀತಿಯಾಗಿ ಕೆಳಮಟ್ಟದಲ್ಲಿ ಮಾತನಾಡ ಬಾರದು. ಈ ರೀತಿಯ ಕುಚ್ವಿತ ಬುದ್ದಿ ಮಾಡಬಾರದು. ಇದು ಅವರ ಸಂಸ್ಕೃತಿ ಸಂಸ್ಕಾರವನ್ನು ತೋರಿಸುತ್ತದೆ. ರಾಜಕಾರಣಿಗಳು ಆಗಿದ್ದರು ನಾವು ಮನುಷ್ಯರು ಇದನ್ನು ನೆನಪಿಟ್ಟುಕೊಳ್ಳಬೇಕು. ಜನ ನಮ್ಮನ್ನು ನೋಡುತ್ತಿರುತ್ತಾರೆ ಎಂದರು.

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

11 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

11 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

11 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

11 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

12 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

12 hours ago