ರಾಜ್ಯ

ಪ್ರಕಾಶ್‌ ರೈ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನೆ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈಟೆಕ್‌ ಡಿಫೆನ್ಸ್‌ ಹಾಗೂ ಏರೋಸ್ಪೇಸ್‌ ಪಾರ್ಕಿಗಾಗಿ ಕೇವಲ 1282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ.

ಪಕ್ಕದ ರಾಜ್ಯ ಆಂಧ್ರಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೆ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ.

ಅಲ್ಲದೇ ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್‌, ಟಿಸಿಎಸ್‌ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಬಹುಭಾಷಾ ನಟ ಪ್ರಕಾಶ್‌ ರೈಗೆ ಇವೆಲ್ಲಾ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.

ನಟ ಪ್ರಕಾಶ್‌ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇವೆ. ರೈತ ಮುಖಂಡ ಬಯ್ಯಾರೆಡ್ಡಿ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್‌ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲಾ ಅರಿಯಬೇಕು ಎಂದು ನಟ ಪ್ರಕಾಶ್‌ ರೈ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

10 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

10 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

11 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

11 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

11 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

12 hours ago