Why isn't Prakash Rai protest in Andhra Pradesh and Tamil Nadu M.B. Patil questions
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈಟೆಕ್ ಡಿಫೆನ್ಸ್ ಹಾಗೂ ಏರೋಸ್ಪೇಸ್ ಪಾರ್ಕಿಗಾಗಿ ಕೇವಲ 1282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ.
ಪಕ್ಕದ ರಾಜ್ಯ ಆಂಧ್ರಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೆ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ.
ಅಲ್ಲದೇ ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್, ಟಿಸಿಎಸ್ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಬಹುಭಾಷಾ ನಟ ಪ್ರಕಾಶ್ ರೈಗೆ ಇವೆಲ್ಲಾ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.
ನಟ ಪ್ರಕಾಶ್ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇವೆ. ರೈತ ಮುಖಂಡ ಬಯ್ಯಾರೆಡ್ಡಿ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲಾ ಅರಿಯಬೇಕು ಎಂದು ನಟ ಪ್ರಕಾಶ್ ರೈ ವಿರುದ್ಧ ಕಿಡಿಕಾರಿದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…