ರಾಜ್ಯ

ಪ್ರಕಾಶ್‌ ರೈ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನೆ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈಟೆಕ್‌ ಡಿಫೆನ್ಸ್‌ ಹಾಗೂ ಏರೋಸ್ಪೇಸ್‌ ಪಾರ್ಕಿಗಾಗಿ ಕೇವಲ 1282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ.

ಪಕ್ಕದ ರಾಜ್ಯ ಆಂಧ್ರಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೆ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ.

ಅಲ್ಲದೇ ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್‌, ಟಿಸಿಎಸ್‌ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಬಹುಭಾಷಾ ನಟ ಪ್ರಕಾಶ್‌ ರೈಗೆ ಇವೆಲ್ಲಾ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.

ನಟ ಪ್ರಕಾಶ್‌ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇವೆ. ರೈತ ಮುಖಂಡ ಬಯ್ಯಾರೆಡ್ಡಿ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್‌ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲಾ ಅರಿಯಬೇಕು ಎಂದು ನಟ ಪ್ರಕಾಶ್‌ ರೈ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago