ರಾಜ್ಯ

ಪ್ರಕಾಶ್‌ ರೈ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನೆ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈಟೆಕ್‌ ಡಿಫೆನ್ಸ್‌ ಹಾಗೂ ಏರೋಸ್ಪೇಸ್‌ ಪಾರ್ಕಿಗಾಗಿ ಕೇವಲ 1282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ.

ಪಕ್ಕದ ರಾಜ್ಯ ಆಂಧ್ರಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೆ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ.

ಅಲ್ಲದೇ ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್‌, ಟಿಸಿಎಸ್‌ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಬಹುಭಾಷಾ ನಟ ಪ್ರಕಾಶ್‌ ರೈಗೆ ಇವೆಲ್ಲಾ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.

ನಟ ಪ್ರಕಾಶ್‌ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇವೆ. ರೈತ ಮುಖಂಡ ಬಯ್ಯಾರೆಡ್ಡಿ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್‌ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲಾ ಅರಿಯಬೇಕು ಎಂದು ನಟ ಪ್ರಕಾಶ್‌ ರೈ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

3 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

4 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

4 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

4 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

4 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

4 hours ago