ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ರಾಜ್ಯ ರಾಜಕಾರಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದೀಗ ಮೈತ್ರಿ ಬಗ್ಗೆ ಅಪಸ್ವರ ಕೇಳಲಾರಂಭಿಸಿದೆ.
ಬೆಂಗಳೂರಿನಲ್ಲಿಂದು ಜೆಡಿಎಸ್ ಕೋರ್ ಕಮಿಟಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಹಿಂದೇಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೀಟು ಹೊಂದಾಣಿಕೆ ಬಗ್ಗೆ ಮಾತುಕತೆಗೆ ಕೂತಾಗ ತಾವು ಬೇಡಿಕೆ ಇಟ್ಟಿದ್ದು ಕೇವಲ 3-4 ಸೀಟುಗಳಿಗೆ ಮಾತ್ರ. ತಮ್ಮ ಸಾಮರ್ಥ್ಯದ ಬಗ್ಗೆ ಸಂಪೂರ್ಣ ಅರಿವಿದೆ ಮತ್ತು ಬಿಜೆಪಿಗೂ ಅದು ಗೊತ್ತಿದೆ. ಹಾಸನ ಮತ್ತು ಮಂಡ್ಯದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಿದರೂ ಗೆಲ್ಲುತ್ತದೆ. ಕೇವಲ ಎರಡು ಸೀಟುಗಳಿಗಾಗಿ ತಾನು ಇಷ್ಟೆಲ್ಲ ಪ್ರಯತ್ನ, ಹೋರಾಟ ಮಾಡಬೇಕಿತ್ತೇ? ಎಂದು ಕುಮಾರಸ್ವಾಮಿ ಬೇಸರದಲ್ಲಿ ಪ್ರಶ್ನಿಸಿದರು.
ಕರ್ನಾಟಕದ ರಾಜಕಾರಣವೇ ಬೇರೆ ಭಾರತದ ಉಳಿದ ಭಾಗಗಳಲ್ಲಿನ ರಾಜಕೀಯ ಚಿತ್ರಣವೇ ಬೇರೆ, ರಾಜ್ಯದ 18 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಕಾರ್ಯಕರ್ತರ ಶ್ರಮವೇ ಬಿಜೆಪಿಗೆ ನೆರವಾಗಲಿದೆ ಎಂದು ಎಚ್ಡಿಕೆ ಹೇಳಿದರು.
ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…
ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…
ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…
ಸೋಮನಾಥ : ಗುಜರಾತ್ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…