ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ರಾಜ್ಯ ರಾಜಕಾರಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದೀಗ ಮೈತ್ರಿ ಬಗ್ಗೆ ಅಪಸ್ವರ ಕೇಳಲಾರಂಭಿಸಿದೆ.
ಬೆಂಗಳೂರಿನಲ್ಲಿಂದು ಜೆಡಿಎಸ್ ಕೋರ್ ಕಮಿಟಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಹಿಂದೇಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೀಟು ಹೊಂದಾಣಿಕೆ ಬಗ್ಗೆ ಮಾತುಕತೆಗೆ ಕೂತಾಗ ತಾವು ಬೇಡಿಕೆ ಇಟ್ಟಿದ್ದು ಕೇವಲ 3-4 ಸೀಟುಗಳಿಗೆ ಮಾತ್ರ. ತಮ್ಮ ಸಾಮರ್ಥ್ಯದ ಬಗ್ಗೆ ಸಂಪೂರ್ಣ ಅರಿವಿದೆ ಮತ್ತು ಬಿಜೆಪಿಗೂ ಅದು ಗೊತ್ತಿದೆ. ಹಾಸನ ಮತ್ತು ಮಂಡ್ಯದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಿದರೂ ಗೆಲ್ಲುತ್ತದೆ. ಕೇವಲ ಎರಡು ಸೀಟುಗಳಿಗಾಗಿ ತಾನು ಇಷ್ಟೆಲ್ಲ ಪ್ರಯತ್ನ, ಹೋರಾಟ ಮಾಡಬೇಕಿತ್ತೇ? ಎಂದು ಕುಮಾರಸ್ವಾಮಿ ಬೇಸರದಲ್ಲಿ ಪ್ರಶ್ನಿಸಿದರು.
ಕರ್ನಾಟಕದ ರಾಜಕಾರಣವೇ ಬೇರೆ ಭಾರತದ ಉಳಿದ ಭಾಗಗಳಲ್ಲಿನ ರಾಜಕೀಯ ಚಿತ್ರಣವೇ ಬೇರೆ, ರಾಜ್ಯದ 18 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಕಾರ್ಯಕರ್ತರ ಶ್ರಮವೇ ಬಿಜೆಪಿಗೆ ನೆರವಾಗಲಿದೆ ಎಂದು ಎಚ್ಡಿಕೆ ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…