Mysore
30
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

Anything can happen in the next two months: Minister K.N. Rajanna reiterates

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಗಳು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದಕ್ಕೆ ಪುಷ್ಠಿ ನೀಡುವಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೆ ದಲಿತ ಸಿಎಂ ಬಗ್ಗೆ ಮಾತನಾಡಿದ್ದಾರೆ.

ಬಿಜೆಪಿ ಬಂದರೆ ಲಿಂಗಾಯತರು ಸಿಎಂ ಆಗುತ್ತಾರೆ. ಜೆಡಿಎಸ್‌ ಬಂದರೆ ಒಕ್ಕಲಿಗರು ಮುಖ್ಯಮಂತ್ರಿಯಾಗುತ್ತಾರೆ. ಇದರಿಂದ ಬೇರೆ ಸಮುದಾಯಕ್ಕೆ ನ್ಯಾಯ ಎಲ್ಲಿ ಕೊಟ್ಟ ಹಾಗೆ ಆಗುತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ದಲಿತರು ಯಾಕೆ ಸಿಎಂ ಆಗಬಾರದು? ಅಲ್ಪಸಂಖ್ಯಾತರು ಯಾಕೆ ಸಿಎಂ ಆಗಬಾರದು? ವಾಸ್ತವಾಂಶ ಹೇಳಿದರೆ ಅದು ಬಹಳ ಜನಕ್ಕೆ ಹಿಡಿಸುವುದಿಲ್ಲ ಎಂದು ಹೇಳುವ ಮೂಲಕ ದಲಿತ ಸಿಎಂ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.

 

Tags:
error: Content is protected !!