ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪತ್ನಿಯಿಂದಲೇ ಕೊಲೆ ಆಗಿದ್ದು, ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ಓಂ ಪ್ರಕಾಶ್ ಅವರನ್ನು ಚೂರಿಯಿಂದ ಇರಿದು ಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ ಎಂಬ ವಿಚಾರ ಬಯಲಾಗಿದೆ. ಈ ಕೊಲೆ ನಡೆಯಲು ನಿಖರ ಕಾರಣ ಏನೆಂದು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
ಓಂ ಪ್ರಕಾಶ್ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜೊತೆ ನೆಲೆಸಿದ್ದರು. ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಪತ್ನಿ ಪಲ್ಲವಿ ಇಂದು ಸಂಜೆ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸೆಂಟ್ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ನಡೆದ ಬಳಿಕ ಮನೆಯಲ್ಲೇ ಇದ್ದ ಓಂ ಪ್ರಕಾಶ್ ಪತ್ನಿ ಹಾಗೂ ಮಗಳನ್ನು ವಿಚಾರಣೆಗೆಂದು ಕರೆದೊಯ್ಯಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ತಿಳಿದುಬಂದಿದೆ. ಇನ್ನು ಓಂ ಪ್ರಕಾಶ್ ಅವರು ತಮ್ಮ ಸಹೋದರಿ ಹೆಸರಿನಲ್ಲಿ ಜಮೀನು ಮಾಡಿದ್ದು ಅದನ್ನು ಹಿಂಪಡೆಯುವಂತೆ ಗಂಡನ ಮೇಲೆ ಪದೇ ಪದೇ ಜಗಳ ಮಾಡುತ್ತಿದ್ದರು ಎನ್ನಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…