ಬೆಂಗಳೂರು : ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25), ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿಸೋರೋದು ತನಿಖೆ ವೇಳೆ ಬಯಲಾಗಿದೆ.
ಬ್ಯಾಡರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿರ್ಮಾಣ ಮೇಲ್ವಿಚಾರಕ ವೀರಭದ್ರ ಹಾಗೂ ಆತನ ಸ್ನೇಹಿತ ಅನಿಲ್ ಇತರ ಆರೋಪಿಗಳಾಗಿದ್ದಾರೆ. ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಶರಣಮ್ಮ ಮತ್ತು ವೀರಭದ್ರ ನಡುವೆ ಸಂಬಂಧವಿತ್ತು. ಆಕೆಯ ಪತಿಗೆ ಇದು ತಿಳಿದಾಗ, ವೀರಭದ್ರನಿಂದ ದೂರವಿರಲು ಎಚ್ಚರಿಸಿದರು. ಇದರಿಂದ ಕೋಪಗೊಂಡ ಶರಣಮ್ಮ ಮತ್ತು ವೀರಭದ್ರ, ಸುರೇಶ್ ಅವರನ್ನು ಕೊಲ್ಲಲು ಯೋಜಿಸಿದ್ದರು ಎನ್ನಲಾಗಿದೆ.
ಭಾನುವಾರ, ಸುರೇಶ್ ಕುಡಿದ ಮತ್ತಿನಲ್ಲಿದ್ದಾಗ, ಶರಣಮ್ಮ ವೀರಭದ್ರನನ್ನು ಮನೆಗೆ ಕರೆದಿದ್ದಾಳೆ. ನಂತರ ಆತನ ಮೇಲೆ ಹಲ್ಲೆ ನಡೆಸಿ, ಕಲ್ಲಿನಿಂದ ತಲೆಗೆ ಹೊಡೆದು ಕತ್ತು ಹಿಸುಕಿ ಕೊಂದಿದ್ದಾರೆ ಎನ್ನಲಾಗಿದೆ. ನಂತರ ಅನಿಲ್ಗೆ ಕರೆ ಮಾಡಿ ಸುರೇಶ್ನ ಶವವನ್ನು ಕಾರಿನಲ್ಲಿ ಗಂಗೊಂಡನಹಳ್ಳಿಗೆ ಸಾಗಿಸಿದ್ದಾರೆ. ಸಾಕ್ಷಿ ನಾಶಮಾಡಲು ಅವರು ಪೆಟ್ರೋಲ್ ಸುರಿದು, ದೇಹವನ್ನು ಸುಟ್ಟು ಹಾಕಿದರು. ಶರಣಮ್ಮ ತನ್ನ ಮನೆಯಿಂದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…