ರಾಜ್ಯ

ಅಕ್ರಮ ಸಂಬಂಧಕ್ಕೆ ಅಡ್ಡಿ : ಪ್ರಿಯಕರನ ಜೊತೆಗೂಡಿ ಪತಿ ಕೊಂದ ಪತ್ನಿ

ಬೆಂಗಳೂರು : ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25), ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿಸೋರೋದು ತನಿಖೆ ವೇಳೆ ಬಯಲಾಗಿದೆ.

ಬ್ಯಾಡರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿರ್ಮಾಣ ಮೇಲ್ವಿಚಾರಕ ವೀರಭದ್ರ ಹಾಗೂ ಆತನ ಸ್ನೇಹಿತ ಅನಿಲ್ ಇತರ ಆರೋಪಿಗಳಾಗಿದ್ದಾರೆ. ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಶರಣಮ್ಮ ಮತ್ತು ವೀರಭದ್ರ ನಡುವೆ ಸಂಬಂಧವಿತ್ತು. ಆಕೆಯ ಪತಿಗೆ ಇದು ತಿಳಿದಾಗ, ವೀರಭದ್ರನಿಂದ ದೂರವಿರಲು ಎಚ್ಚರಿಸಿದರು. ಇದರಿಂದ ಕೋಪಗೊಂಡ ಶರಣಮ್ಮ ಮತ್ತು ವೀರಭದ್ರ, ಸುರೇಶ್ ಅವರನ್ನು ಕೊಲ್ಲಲು ಯೋಜಿಸಿದ್ದರು ಎನ್ನಲಾಗಿದೆ.

ಭಾನುವಾರ, ಸುರೇಶ್ ಕುಡಿದ ಮತ್ತಿನಲ್ಲಿದ್ದಾಗ, ಶರಣಮ್ಮ ವೀರಭದ್ರನನ್ನು ಮನೆಗೆ ಕರೆದಿದ್ದಾಳೆ. ನಂತರ ಆತನ ಮೇಲೆ ಹಲ್ಲೆ ನಡೆಸಿ, ಕಲ್ಲಿನಿಂದ ತಲೆಗೆ ಹೊಡೆದು ಕತ್ತು ಹಿಸುಕಿ ಕೊಂದಿದ್ದಾರೆ ಎನ್ನಲಾಗಿದೆ. ನಂತರ ಅನಿಲ್‌ಗೆ ಕರೆ ಮಾಡಿ ಸುರೇಶ್‌ನ ಶವವನ್ನು ಕಾರಿನಲ್ಲಿ ಗಂಗೊಂಡನಹಳ್ಳಿಗೆ ಸಾಗಿಸಿದ್ದಾರೆ. ಸಾಕ್ಷಿ ನಾಶಮಾಡಲು ಅವರು ಪೆಟ್ರೋಲ್ ಸುರಿದು, ದೇಹವನ್ನು ಸುಟ್ಟು ಹಾಕಿದರು. ಶರಣಮ್ಮ ತನ್ನ ಮನೆಯಿಂದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago