ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17ಆರೋಪಿಗಳು ಜೈಲು ಸೇರಿದ್ದು. ಈ ಪೈಕಿ ಈಗಾಗಲೇ 3ಜನರಿಗೆ ಜಾಮೀನು ಮಂಜೂರಾಗಿದೆ. ಸೆ.27ರಂದು ದರ್ಶನ್ ಅರ್ಜಿ ವಿಚಾರಣೆ ನಡೆಸಿ, ಸೆ.30ಕ್ಕೆ (ಅಂದರೆ ಇಂದು) ಮುಂದೂಡಿತ್ತು. ಹೀಗಾಗಿ ಇಂದು ದರ್ಶನ್ ಪರ ಅರ್ಜಿ ವಿಚಾರಣೆ ನಡೆಯಲಿದೆ.
ಈ ನಡುವೆ ದರ್ಶನ್ ಬಿಡುಗಡೆಯಾದರೆ ಬೆಂಗಳೂರಿಗೆ ಕರೆತರಲು ಹೆಲಿಕಾಪ್ಟರ್ ಬುಕ್ ಮಾಡಿರುವ ಅಪ್ಡೇಟ್ವೊಂದು ಸಿಕ್ಕಿದೆ. ಇಂದಿನ ವಿಚಾರಣೆಯಲ್ಲಿ ದರ್ಶನ್ ಬಿಡುಗಡೆಯಾಗಲಿದ್ದಾರೆ ಎನ್ನುವ ಭರವಸೆಯಿಂದ ಬಳ್ಳಾರಿಯಿಂದ ಬೆಂಗಳೂರಿಗೆ ಹೆಲಿಕಾಪ್ಟರ್ ಅನ್ನು ಕಾಯ್ದಿರಿಸಲಾಗಿದೆ ಎನ್ನಲಾಗಿದೆ.
ಬೆಂಗಳೂರು ಪರಪ್ಪನ ಆಗ್ರಹಾರದಲಿದ್ದ ದಾಸ ಬಳ್ಳಾರಿಯ ಸೆಂಟ್ರಲ್ ಜೈಲು ಸೇರಿದ್ದಾರೆ. ಇತ್ತ ಬಿಡುಗಡೆಗೆ ಪತ್ನಿ ವಿಜಯಲಕ್ಷ್ಮಿಹಾಗೂ ಕುಟುಂಬ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅಭಿಮಾನಿಗಳು ಕೂಡ ನೆಚ್ಚಿನ ನಟನ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಹೀಗಾಗಿ, ದರ್ಶನ್ ಬಿಡುಗಡೆ ಆದ ಮೇಲೆ ಬೆಂಗಳೂರಿಗೆ ರಸ್ತೆ ಮೂಲಕ ಕರೆತಂದರೆ ಅಭಿಮಾನಿಗಳ ದಂಡು ನೆರೆಯುತ್ತದೆ ಎಂದು ವಿಜಯಲಕ್ಷ್ಮಿ ಅವರು ಹೆಲಿಕಾಪ್ಟರ್ ಬುಕ್ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…