ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17ಆರೋಪಿಗಳು ಜೈಲು ಸೇರಿದ್ದು. ಈ ಪೈಕಿ ಈಗಾಗಲೇ 3ಜನರಿಗೆ ಜಾಮೀನು ಮಂಜೂರಾಗಿದೆ. ಸೆ.27ರಂದು ದರ್ಶನ್ ಅರ್ಜಿ ವಿಚಾರಣೆ ನಡೆಸಿ, ಸೆ.30ಕ್ಕೆ (ಅಂದರೆ ಇಂದು) ಮುಂದೂಡಿತ್ತು. ಹೀಗಾಗಿ ಇಂದು ದರ್ಶನ್ ಪರ ಅರ್ಜಿ ವಿಚಾರಣೆ ನಡೆಯಲಿದೆ.
ಈ ನಡುವೆ ದರ್ಶನ್ ಬಿಡುಗಡೆಯಾದರೆ ಬೆಂಗಳೂರಿಗೆ ಕರೆತರಲು ಹೆಲಿಕಾಪ್ಟರ್ ಬುಕ್ ಮಾಡಿರುವ ಅಪ್ಡೇಟ್ವೊಂದು ಸಿಕ್ಕಿದೆ. ಇಂದಿನ ವಿಚಾರಣೆಯಲ್ಲಿ ದರ್ಶನ್ ಬಿಡುಗಡೆಯಾಗಲಿದ್ದಾರೆ ಎನ್ನುವ ಭರವಸೆಯಿಂದ ಬಳ್ಳಾರಿಯಿಂದ ಬೆಂಗಳೂರಿಗೆ ಹೆಲಿಕಾಪ್ಟರ್ ಅನ್ನು ಕಾಯ್ದಿರಿಸಲಾಗಿದೆ ಎನ್ನಲಾಗಿದೆ.
ಬೆಂಗಳೂರು ಪರಪ್ಪನ ಆಗ್ರಹಾರದಲಿದ್ದ ದಾಸ ಬಳ್ಳಾರಿಯ ಸೆಂಟ್ರಲ್ ಜೈಲು ಸೇರಿದ್ದಾರೆ. ಇತ್ತ ಬಿಡುಗಡೆಗೆ ಪತ್ನಿ ವಿಜಯಲಕ್ಷ್ಮಿಹಾಗೂ ಕುಟುಂಬ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅಭಿಮಾನಿಗಳು ಕೂಡ ನೆಚ್ಚಿನ ನಟನ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಹೀಗಾಗಿ, ದರ್ಶನ್ ಬಿಡುಗಡೆ ಆದ ಮೇಲೆ ಬೆಂಗಳೂರಿಗೆ ರಸ್ತೆ ಮೂಲಕ ಕರೆತಂದರೆ ಅಭಿಮಾನಿಗಳ ದಂಡು ನೆರೆಯುತ್ತದೆ ಎಂದು ವಿಜಯಲಕ್ಷ್ಮಿ ಅವರು ಹೆಲಿಕಾಪ್ಟರ್ ಬುಕ್ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…