Eshwara Khandre
ಬೆಂಗಳೂರು: ಶಿವನಸಮುದ್ರದ ಕಾಲುವೆಗೆ ಇಳಿದಿದ್ದ ಗಂಡಾನೆಯನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ನೀರು ಕುಡಿಯಲು ಕಾಲುವೆಗೆ ಇಳಿದ ಆನೆ ಕಳೆದ ಮೂರು ದಿನಗಳಿಂದ ಮೇಲೆ ಬರಲಾರದೆ, ಆಹಾರವೂ ಸಿಗದೆ ನಿತ್ರಾಣವಾಗಿತ್ತು. ಅರಣ್ಯ ಸಿಬ್ಬಂದಿ ಕಠಿಣ ಪರಿಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿ ಆನೆಯನ್ನು ಸುರಕ್ಷಿತವಾಗಿ ಮೇಲೆತ್ತಿರುವುದಾಗಿ ತಿಳಿಸಿದ್ದಾರೆ ಎಂದು ಸಚಿವರು ತಿಳಿಸಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆನೆಯೊಂದು ಶಿವನಸಮುದ್ರದ ಕಾಲುವೆಯಲ್ಲಿ ಸಿಲುಕಿದೆ ಎಂಬ ಮಾಹಿತಿ ತಮಗೆ ದೊರೆತ ಕೂಡಲೇ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಕರೆ ಮಾಡಿ ತತ್ ಕ್ಷಣ ಕ್ರಮ ಕೈಗೊಂಡು ಆನೆ ರಕ್ಷಿಸಲು ಸೂಚಿಸಿದ್ದಾಗಿಯೂ ಸಚಿವರು ಹೇಳಿದರು.
12 ವರ್ಷದ ಆನೆಯನ್ನು 50 ಅಡಿ ಆಳದಿಂದ ಮೇಲೆತ್ತಲಾಗಿದೆ. ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಚರಣೆಗೆ ಅಡ್ಡಿಯಾಗಿತ್ತು. ರಕ್ಷಿಸಲಾದ ಆನೆ ಯಶಸ್ವಿಯಾಗಿ ಹತ್ತಿರದ ಅರಣ್ಯದತ್ತ ಹೆಜ್ಜೆ ಹಾಕಿದೆ ಎಂದು ತಿಳಿಸಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…