Eshwara Khandre
ಬೆಂಗಳೂರು: ಶಿವನಸಮುದ್ರದ ಕಾಲುವೆಗೆ ಇಳಿದಿದ್ದ ಗಂಡಾನೆಯನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ನೀರು ಕುಡಿಯಲು ಕಾಲುವೆಗೆ ಇಳಿದ ಆನೆ ಕಳೆದ ಮೂರು ದಿನಗಳಿಂದ ಮೇಲೆ ಬರಲಾರದೆ, ಆಹಾರವೂ ಸಿಗದೆ ನಿತ್ರಾಣವಾಗಿತ್ತು. ಅರಣ್ಯ ಸಿಬ್ಬಂದಿ ಕಠಿಣ ಪರಿಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿ ಆನೆಯನ್ನು ಸುರಕ್ಷಿತವಾಗಿ ಮೇಲೆತ್ತಿರುವುದಾಗಿ ತಿಳಿಸಿದ್ದಾರೆ ಎಂದು ಸಚಿವರು ತಿಳಿಸಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆನೆಯೊಂದು ಶಿವನಸಮುದ್ರದ ಕಾಲುವೆಯಲ್ಲಿ ಸಿಲುಕಿದೆ ಎಂಬ ಮಾಹಿತಿ ತಮಗೆ ದೊರೆತ ಕೂಡಲೇ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಕರೆ ಮಾಡಿ ತತ್ ಕ್ಷಣ ಕ್ರಮ ಕೈಗೊಂಡು ಆನೆ ರಕ್ಷಿಸಲು ಸೂಚಿಸಿದ್ದಾಗಿಯೂ ಸಚಿವರು ಹೇಳಿದರು.
12 ವರ್ಷದ ಆನೆಯನ್ನು 50 ಅಡಿ ಆಳದಿಂದ ಮೇಲೆತ್ತಲಾಗಿದೆ. ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಚರಣೆಗೆ ಅಡ್ಡಿಯಾಗಿತ್ತು. ರಕ್ಷಿಸಲಾದ ಆನೆ ಯಶಸ್ವಿಯಾಗಿ ಹತ್ತಿರದ ಅರಣ್ಯದತ್ತ ಹೆಜ್ಜೆ ಹಾಕಿದೆ ಎಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…