ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಪ್ರತಿ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗವನ್ನು ನೀಡುವುದಾಗಿ ಘೋಷಿಸಿದ್ದಾರೆ.
ಈ ಪ್ರದೇಶದಲ್ಲಿ ಆನೆಗಳ ಹಾವಳಿ ಹೆಚ್ಚಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿ ಸುಮಾರು 125 ಆನೆಗಳಿವೆ ಆದರೆ, ಅವುಗಳ ಸಂಖ್ಯೆ ಕೆಲವೊಮ್ಮೆ 220ಕ್ಕೆ ಏರುತ್ತದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವು ತಮಿಳುನಾಡಿನೊಂದಿಗೆ ಗಡಿಯನ್ನು ಹೊಂದಿದೆ. ಕನಕಪುರ, ಕಾವೇರಿ ಮತ್ತು ರಾಮನಗರ ಅರಣ್ಯ ಶ್ರೇಣಿಗಳೊಂದಿಗೆ ಗಡಿಗಳನ್ನು ಹಂಚಿಕೊಂಡಿರುವುದರಿಂದ ಈ ಭಾಗದಲ್ಲಿ ಆನೆಗಳ ಚಲನವಲನ ಹೆಚ್ಚಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅರಣ್ಯ ವ್ಯಾಪ್ತಿಯಲ್ಲಿ ಜನರ ಓಡಾಟ ಹೆಚ್ಚಾದಂತೆ ಸಮಸ್ಯೆ ಉಲ್ಬಣಗೊಂಡಿದೆ. ನಾಗರಿಕ ಚಟುವಟಿಕೆಗಳು, ಅತಿಕ್ರಮಣ ಮತ್ತು ಜನರ ಉಪಸ್ಥಿತಿಯಲ್ಲಿ ಆನೆ ದಾಳಿ ಹೆಚ್ಚಳವಾಗಿದೆ. ರೈಲು ತಡೆಗೋಡೆಗಳನ್ನು ರಚಿಸಲು ಮತ್ತು ಹಳೆಯ ಸೋಲಾರ್ ಮತ್ತು ಮುಳ್ಳುತಂತಿಗಳನ್ನು ಬದಲಾಯಿಸಲು ಹಣದ ಕೊರತೆಯಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಇಲ್ಲಿ ಗ್ರೌಂಡ್ ಸಿಬ್ಬಂದಿ ಕೊರತೆಯೂ ಇರುವುದಾಗಿ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ರಾತ್ರಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಸೂಕ್ತ ಭದ್ರತೆ ಬೇಕು ಎಂಬುದಕ್ಕೆ ಇಲ್ಲಿ ಆಗುತ್ತಿರುವ ಘಟನೆಗಳೇ ನಿದರ್ಶನಗಳಾಗಿವೆ ಎಂದು ತಿಳಿಸಿದ್ದಾರೆ.
ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…
ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…
ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…