ರಾಜ್ಯ

ಬನ್ನೇರುಘಟ್ಟದಲ್ಲಿ ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಮೂರು ಮಂದಿ ಸಾವು

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ.

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಪ್ರತಿ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗವನ್ನು ನೀಡುವುದಾಗಿ ಘೋಷಿಸಿದ್ದಾರೆ.

ಈ ಪ್ರದೇಶದಲ್ಲಿ ಆನೆಗಳ ಹಾವಳಿ ಹೆಚ್ಚಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿ ಸುಮಾರು 125 ಆನೆಗಳಿವೆ ಆದರೆ, ಅವುಗಳ ಸಂಖ್ಯೆ ಕೆಲವೊಮ್ಮೆ 220ಕ್ಕೆ ಏರುತ್ತದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವು ತಮಿಳುನಾಡಿನೊಂದಿಗೆ ಗಡಿಯನ್ನು ಹೊಂದಿದೆ. ಕನಕಪುರ, ಕಾವೇರಿ ಮತ್ತು ರಾಮನಗರ ಅರಣ್ಯ ಶ್ರೇಣಿಗಳೊಂದಿಗೆ ಗಡಿಗಳನ್ನು ಹಂಚಿಕೊಂಡಿರುವುದರಿಂದ ಈ ಭಾಗದಲ್ಲಿ ಆನೆಗಳ ಚಲನವಲನ ಹೆಚ್ಚಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅರಣ್ಯ ವ್ಯಾಪ್ತಿಯಲ್ಲಿ ಜನರ ಓಡಾಟ ಹೆಚ್ಚಾದಂತೆ ಸಮಸ್ಯೆ ಉಲ್ಬಣಗೊಂಡಿದೆ. ನಾಗರಿಕ ಚಟುವಟಿಕೆಗಳು, ಅತಿಕ್ರಮಣ ಮತ್ತು ಜನರ ಉಪಸ್ಥಿತಿಯಲ್ಲಿ ಆನೆ ದಾಳಿ ಹೆಚ್ಚಳವಾಗಿದೆ. ರೈಲು ತಡೆಗೋಡೆಗಳನ್ನು ರಚಿಸಲು ಮತ್ತು ಹಳೆಯ ಸೋಲಾರ್‌ ಮತ್ತು ಮುಳ್ಳುತಂತಿಗಳನ್ನು ಬದಲಾಯಿಸಲು ಹಣದ ಕೊರತೆಯಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಇಲ್ಲಿ ಗ್ರೌಂಡ್‌ ಸಿಬ್ಬಂದಿ ಕೊರತೆಯೂ ಇರುವುದಾಗಿ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ರಾತ್ರಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಸೂಕ್ತ ಭದ್ರತೆ ಬೇಕು ಎಂಬುದಕ್ಕೆ ಇಲ್ಲಿ ಆಗುತ್ತಿರುವ ಘಟನೆಗಳೇ ನಿದರ್ಶನಗಳಾಗಿವೆ ಎಂದು ತಿಳಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

3 seconds ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

39 mins ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

1 hour ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

2 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

3 hours ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

7 hours ago