ರಾಜ್ಯ

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು ವನ್ಯಜೀವಿ -ಮಾನವ ಸಂಘರ್ಷ ಇರುವ ಪ್ರದೇಶಗಳ ಸ್ಥಳೀಯ ಮುಖಂಡರ, ಗ್ರಾಮಗಳ ಜಮೀನು ಮಾಲೀಕರ ವಾಟ್ಸ್ ಅಪ್ ಗ್ರೂಪ್ ಮಾಡಿ ಮಾಹಿತಿ ಪ್ರಸಾರ ಮಾಡುವಂತೆ ಸೂಚಿಸಿದರು.

ಮಾನವ ಜೀವ ಅತ್ಯಮೂಲ್ಯವಾದ್ದು, ಒಂದು ಜೀವಹಾನಿ ಆದ ಬಳಿಕ ಮತ್ತೊಂದು ಜೀವ ಹಾನಿ ಆಗಿರುವುದು ಅತ್ಯಂತ ನೋವಿನ ಸಂಗತಿ. ಅಧಿಕಾರಿಗಳು ಮತ್ತು ಸಿಬ್ಬಂದಿ ಇಂತಹ ಘಟನೆ ಮರುಕಳಿಸದಂತೆ 24×7 ನಿಗಾ ಇಡಬೇಕು. ಕಡ್ಡಾಯವಾಗಿ ಸೆಕ್ಷನ್ 144 ಜಾರಿ ಮಾಡಿ ವನ್ಯಜೀವಿ ಸರೆ ಕಾರ್ಯಾಚರಣೆ ನಡೆಸಬೇಕು. ಅತ್ಯಾಧುನಿಕ ಸಲಕರಣೆಗಳಾದ ಥರ್ಮಲ್ ಡ್ರೋನ್ ಬಳಕೆ ಮಾಡಬೇಕು ಎಂದು ಸೂಚಿಸಿದರು.

ಚಿಕ್ಕಮಗಳೂರಿನಲ್ಲಿ ಕಳೆದ ವಾರ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ಬಳಿಕ, ಆನೆ ಸೆರೆಗೆ ಕ್ರಮ ಕೈಗೊಳ್ಳಲಾಗಿತ್ತು. ಸ್ಥಳೀಯರಿಗೆ ತೋಟಕ್ಕೆ ಹೋಗದಂತೆ ಮಾಹಿತಿ ನೀಡಲಾಗಿತ್ತು. ಆದಾಗ್ಯೂ ತೋಟಕ್ಕೆ ಹೋದ ಕಾರಣ ಈ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಅರಣ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದ ಬಳಿಕವೂ ತೋಟದ ಮಾಲೀಕರು ಕಾರ್ಮಿಕರನ್ನು ತೋಟಕ್ಕೆ ಕಳಿಸಿದರೆ ಅಂತಹ ಮಾಲೀಕರಿಗೆ ಎಚ್ಚರಿಕೆ ನೀಡಿ, ತೋಟದ ಮಾಲೀಕರಿಗೂ ಜವಾಬ್ದಾರಿ ಇರಬೇಕು. ನಿರ್ಲಕ್ಷ್ಯ ತೋರಿದರೆ ದೂರು ದಾಖಲಿಸಿ ಎಂದು ತಿಳಿಸಿದರು.

ಮಾಹಿತಿಯ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯದ ಹೊರಗೆ 35 ಆನೆಗಳು 3 ಗುಂಪಿನಲ್ಲಿ ಸಂಚರಿಸುತ್ತಿದ್ದು, ಬೇಸಿಗೆಯಲ್ಲಿ ಅವುಗಳು ಕಾಡಿನಿಂದ ಹೊರಬರುವುದು ಸಾಮಾನ್ಯ. ಆದಾಗ್ಯೂ ಸಿಬ್ಬಂದಿ ಮತ್ತು ಅಧಿಕಾರಿಗಳು ವನ್ಯಜೀವಿ-ಮಾನವ ಸಂಘರ್ಷ ಆಗದಂತೆ ನಿಗಾ ಇಡಬೇಕು. ಪ್ರತಿ ವರ್ಷ ವನ್ಯಜೀವಿ- ಮಾನವ ದಾಳಿಯಲ್ಲಿ ಆಗುತ್ತಿರುವ ಸಾವಿನ ಸಂಖ್ಯೆ ಇಳಿಕೆಯಾಗಬೇಕೇ ಹೊರತು, ಹೆಚ್ಚಳ ಆಗಬಾರದು ನೀವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago