ರಾಜ್ಯ

RSS ಗೀತೆ ಹಾಡಿದ ಡಿಕೆಶಿ ಬಿಜೆಪಿ ಸೇರುತ್ತಾರೆಯೇ? ಸಾಮಾಜಿಕ ಜಾಲತಾಣದಲ್ಲಿ ಹೀಗೊಂದು ಚರ್ಚೆ

ಬೆಂಗಳೂರು : ವಿಧಾನಸಭೆಯ ಅಧಿವೇಶನದಲ್ಲಿ ಚಿನ್ನಸ್ವಾಮಿ ಕಾಲ್ತುಳಿಯದ ಬಗ್ಗೆ ಚರ್ಚೆ ನಡೆಯುವ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು, ನಮಸ್ತೆ ಸದಾ ವತ್ಸಲೆ ಮಾತೃಭೂಮಿ ಎನ್ನುವ ಆರ್‌ಎಸ್‌ಎಸ್‌ ಗೀತೆ ಕೆಲ ಸಾಲುಗಳನ್ನು ಹಾಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. “ಇದು ಸಿದ್ದರಾಮಯ್ಯನವರಿಗೆ ನೇರ ಎಚ್ಚರಿಕೆಯೇ? ನೀವು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡದಿದ್ದರೆ ನಾನು ಬಿಜೆಪಿ ಸೇರಲು ಸಿದ್ಧನಿದ್ದೇನೆ ಎಂಬ ಸಂದೇಶವೇ?” ಎಂದು ಒಬ್ಬ ಎಕ್ಸ್ ಬಳಕೆದಾರರು ಹೇಳಿದ್ದಾರೆ.

“ಸ್ವಾತಂತ್ರೋತ್ಸವದ ಭಾಷಣದಲ್ಲಿ ಆರ್‌ಎಸ್ಎಸ್ ಹೊಗಳಿದ ಪ್ರಧಾನಿ ಮೋದಿಯನ್ನು ಕಾಂಗ್ರೆಸ್ ಟೀಕೆ ಮಾಡುತ್ತಿರುವ ಸಮಯದಲ್ಲಿ ಡಿಕೆ ಶಿವಕುಮಾರ್ ಅವರು ಆರ್‌ಸ್ಎಸ್ ಗೀತೆ ಹಾಡಿದ್ದಾರೆ. ಶೀಘ್ರ ಕಾಂಗ್ರೆಸ್ ಅವರನ್ನು ಸಿಎಂ ಮಾಡದಿದ್ದರೆ, ಅವರು ಕಾಶಿ ಮಥುರಾ ಬಾಕಿ ಹೈ ಎಂಬ ಘೋಷಣೆ ಕೂಗಬಹುದು ಎಂದು ಮತ್ತೊಬ್ಬರು ಹೇಳಿದ್ದಾರೆ.

ಹುಟ್ಟು ಕಾಂಗ್ರೆಸಿಗ
ಈ ಬಗ್ಗೆ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ನಾನು ಹುಟ್ಟು ಕಾಂಗ್ರೆಸಿಗ, ನನ್ನ ರಕ್ತ, ಜೀವ ಎಲ್ಲಾ ಕಾಂಗ್ರೆಸ್ ನಲ್ಲಿದೆ. ನಾನು ಎಲ್ಲಾ ರಾಜಕೀಯ ಪಕ್ಷಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ. ಆರ್‌ಎಸ್ಎಸ್ ಹೇಗೆ ಕರ್ನಾಟಕದಲ್ಲಿ ಶಾಲೆಗಳನ್ನು ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ ಎಂದು ಅಧ್ಯಯನ ಮಾಡಿದ್ದೇನೆ. ಒಬ್ಬ ನಾಯಕನಾಗಿ ಯಾರು ನನ್ನ ವಿರೋಧಿಗಳು ಎಂದು ನನಗೆ ತಿಳಿದಿರಬೇಕು. ಅದರ ಇತಿಹಾಸದ ಬಗ್ಗೆ ತಿಳಿಯುತ್ತಿದ್ದೇನೆ ಎಂದ ಅವರು, ನಾನು ಬಿಜೆಪಿಗೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

7 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

11 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

11 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

12 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

13 hours ago