ನವದೆಹಲಿ: ನರೇಂದ್ರ ಮೋದಿ ಸಂಪುಟದಲ್ಲಿ ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಮಂತ್ರಿ ಭಾಗ್ಯ ಫಿಕ್ಸ್ ಆಗಿದೆ.
ಈ ಕುರಿತು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿ.ಸೋಮಣ್ಣ ಬಿಜೆಪಿ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ. ಪಕ್ಷ ನನಗೆ ಯಾವ ಖಾತೆ ಕೊಟ್ರು ಸಮರ್ಥವಾಗಿ ನಿಭಾಯಿಸುವೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ನಮಗೆ ಹೇಗೆ ನಡೆದುಕೊಳ್ಳಬೇಕು ಎಂದು ಹೇಳಿಕೊಟ್ಟಿದ್ದಾರೆ. ಎಲ್ಲಕ್ಕಿಂತ ದೇಶ ದೊಡ್ಡದು ಎಂದು ತಿಳಿಸಿಕೊಟ್ಟಿದ್ದಾರೆ. ನಾನು ಮೋದಿ ಹಾಗೂ ಪಕ್ಷಕ್ಕೆ ಆಭಾರಿಯಾಗಿದ್ದೇನೆ ಎಂದರು.
ಸೋಮಣ್ಣ ಬಗ್ಗೆ ಒಂದಿಷ್ಟು ಮಾಹಿತಿ
ವಿ.ಸೋಮಣ್ಣ ಅವರು ರಾಮನಗರ ಜಿಲ್ಲೆಯ ದೊಡ್ಡಮರಳವಾಡಿಯಲ್ಲಿ ವೀರಣ್ಣ ಮತ್ತು ಕೆಂಪಮ್ಮ ದಂಪತಿಗಳಿಗೆ 1951ಜುಲೈ 20 ರಂದು ಜನಿಸಿದರು. ಸೋಮಣ್ಣ ಶೈಲಜಾ ದಂಪತಿಗಳಿಗೆ ಮೂರು ಮಕ್ಕಳಿದ್ದಾರೆ. 1983 ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಇವರು 2016 ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಯನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಂತರ 2018 ರಿಂದ 2023ರವರೆಗೆ ಬೆಂಗಳೂರಿನ ಗೋವಿಂದರಾಜ್ ನಗರ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಯ ಶಾಸಕರಾಗಿದ್ದರು. ಯಡಿಯೂರಪ್ಪ ಹಾಗೂ ಬಸವರಾಜು ಬೊಮ್ಮಾಯಿ ಸಂಪುಟದಲ್ಲಿ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವರಾಗಿದ್ದರು. ಇದೀಗ 2024 ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…