ಬೆಂಗಳೂರು: ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ.
ಈ ಬಗ್ಗೆ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಹಾಲು ಉತ್ಪಾದಕರಿಗೆ 656.07 ಕೋಟಿ ರೂ ಪ್ರೋತ್ಸಾಹಧನ ಬಾಕಿ ಉಳಿದುಕೊಂಡಿದೆ. 9,04,547 ಫಲಾನುಭವಿಗಳಿಗೆ ಬಾಕಿ ಹಣ ಕೊಡಬೇಕಾಗಿದೆ. ಇದರಲ್ಲಿ ಸಾಮಾನ್ಯ ವರ್ಗಕ್ಕೆ 613.58 ಕೋಟಿ ರೂ ಹಾಗೂ ಪರಿಶಿಷ್ಟ ಜಾತಿಯವರಿಗೆ 18.29 ಕೋಟಿ ರೂ ಹಾಗೂ ಪರಿಶಿಷ್ಟ ಪಂಗಡಕ್ಕೆ 24.20 ಕೋಟಿ ರೂ ಬಾಕಿಯಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನ ಉತ್ಪಾದನೆ ಜಾಸ್ತಿ ಆಗಿದೆ. ಸಿಎಂ ಅವರಿಗೆ ಬಾಕಿ ಹಣ ಬಿಡುಗಡೆಗೆ ಮನವಿ ಮಾಡಿದ್ದೇವೆ. ಆದಷ್ಟು ಬೇಗ ಬಾಕಿ ಹಣ ಬಿಡುಗಡೆ ಮಾಡುತ್ತೇವೆ. ಇನ್ನೂ ಹಾಲಿನ ದರ ಏರಿಕೆಗೆ ರೈತರ ಬೇಡಿಕೆಯಿದ್ದು, 10 ರೂ ಜಾಸ್ತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಹಾಲಿನ ದರ ಏರಿಕೆ ಮಾಡೇ ಮಾಡುತ್ತೇವೆ. ಎಷ್ಟು ಎಂದು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…