ರಾಜ್ಯ

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಬಿಜೆಪಿಯ ಶಾಸಕ ಡಾ.ಸಿ.ಎನ್‌ ಅಶ್ವಥ್‌ನಾರಾಯಣ ಹೊಸ ವಿವಿಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವ ಕುರಿತು ನಿಲುವಳಿ ಸೂಚನೆ ಮಂಡಿಸಲು ಮುಂದಾದರು.

ಆಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ, ಹೊಸ ವಿವಿಗಳನ್ನು ಮುಚ್ಚುವಂತಹ ಯಾವುದೇ ತೀರ್ಮಾನವನ್ನು ಸರ್ಕಾರ ಮಾಡಿಲ್ಲ. ಯಾವುದೇ ಆತಂಕ ಬೇಡ ಎಂದರು.

ಈ ಹಿಂದೆ ಹೊಸ ವಿವಿಗಳನ್ನು ಮುಚ್ಚಬೇಕೋ ಅಥವಾ ಬೇಡವೋ ಎಂಬುದರ ಕುರಿತು ಉಪಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಿದೆ. ವರದಿ ಸಲ್ಲಿಕೆ ನಂತರ ನಿರ್ಧಾರ ಕೈಗೊಳ್ಳಲಾಗುವುದು. ಆದ್ದರಿಂದ ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡುವುದು ಸರಿಯಲ್ಲ ಎಂದರು.

ಮಧ್ಯ ಪ್ರವೇಶಿಸಿದ ವಿಪಕ್ಷ ನಾಯಕ ಆರ್‌.ಅಶೋಕ್‌, ಈ ವಿಚಾರವಾಗಿ ನಿಮ್ಮ ಸರ್ಕಾರದಲ್ಲೆ ದ್ವಂದ್ವ ನಿಲುವು ಇದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಮುಚ್ಚುತ್ತೇವೆ ಅಂತಾರೆ. ಸಿಎಂ ಇಲ್ಲ ಎನ್ನುತ್ತಾರೆ. ಬಾಗಿಲು ಮುಚ್ಚುತ್ತೇವೆ, ಬೀಗ ಹಾಕುವುದಿಲ್ಲ ಎಂಬಂತಿದೆ ನಿಮ್ಮ ಹೇಳಿಕೆ ಎಂದು ಕಿಚಾಯಿಸಿದರು.

ಅಶೋಕ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಸ್ತಾಪಿಸುವ ವಿಷಯ ಸಾರ್ವಜನಿಕ ಮಹತ್ವವನ್ನು ಹೊಂದಿರಬೇಕು. ಸಂಪುಟ ಉಪಸಮಿತಿಯ ವರದಿ ಇನ್ನು ಬಂದಿಲ್ಲ. ಈಗ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ವಾದಿಸಿದರು.

ಅಂತಿಮವಾಗಿ ಸ್ಪೀಕರ್‌ ಖಾದರ್‌ ಅವರು, ನಿಯಮ 69ರ ಅಡಿಯಲ್ಲಿ ಈ ಕುರಿತು ಮುಂದೆ ಅಲ್ಪ ಕಾಲಾವಧಿಯ ಚರ್ಚೆಗೆ ಅವಕಾಶ ನೀಡುವುದಾಗಿ ಪ್ರಕಟಿಸಿದರು.

ಆಂದೋಲನ ಡೆಸ್ಕ್

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

10 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

11 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

12 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

12 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

13 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

13 hours ago