ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಬಿಜೆಪಿಯ ಶಾಸಕ ಡಾ.ಸಿ.ಎನ್ ಅಶ್ವಥ್ನಾರಾಯಣ ಹೊಸ ವಿವಿಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವ ಕುರಿತು ನಿಲುವಳಿ ಸೂಚನೆ ಮಂಡಿಸಲು ಮುಂದಾದರು.
ಆಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ, ಹೊಸ ವಿವಿಗಳನ್ನು ಮುಚ್ಚುವಂತಹ ಯಾವುದೇ ತೀರ್ಮಾನವನ್ನು ಸರ್ಕಾರ ಮಾಡಿಲ್ಲ. ಯಾವುದೇ ಆತಂಕ ಬೇಡ ಎಂದರು.
ಈ ಹಿಂದೆ ಹೊಸ ವಿವಿಗಳನ್ನು ಮುಚ್ಚಬೇಕೋ ಅಥವಾ ಬೇಡವೋ ಎಂಬುದರ ಕುರಿತು ಉಪಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಿದೆ. ವರದಿ ಸಲ್ಲಿಕೆ ನಂತರ ನಿರ್ಧಾರ ಕೈಗೊಳ್ಳಲಾಗುವುದು. ಆದ್ದರಿಂದ ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡುವುದು ಸರಿಯಲ್ಲ ಎಂದರು.
ಮಧ್ಯ ಪ್ರವೇಶಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಈ ವಿಚಾರವಾಗಿ ನಿಮ್ಮ ಸರ್ಕಾರದಲ್ಲೆ ದ್ವಂದ್ವ ನಿಲುವು ಇದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಚ್ಚುತ್ತೇವೆ ಅಂತಾರೆ. ಸಿಎಂ ಇಲ್ಲ ಎನ್ನುತ್ತಾರೆ. ಬಾಗಿಲು ಮುಚ್ಚುತ್ತೇವೆ, ಬೀಗ ಹಾಕುವುದಿಲ್ಲ ಎಂಬಂತಿದೆ ನಿಮ್ಮ ಹೇಳಿಕೆ ಎಂದು ಕಿಚಾಯಿಸಿದರು.
ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಸ್ತಾಪಿಸುವ ವಿಷಯ ಸಾರ್ವಜನಿಕ ಮಹತ್ವವನ್ನು ಹೊಂದಿರಬೇಕು. ಸಂಪುಟ ಉಪಸಮಿತಿಯ ವರದಿ ಇನ್ನು ಬಂದಿಲ್ಲ. ಈಗ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ವಾದಿಸಿದರು.
ಅಂತಿಮವಾಗಿ ಸ್ಪೀಕರ್ ಖಾದರ್ ಅವರು, ನಿಯಮ 69ರ ಅಡಿಯಲ್ಲಿ ಈ ಕುರಿತು ಮುಂದೆ ಅಲ್ಪ ಕಾಲಾವಧಿಯ ಚರ್ಚೆಗೆ ಅವಕಾಶ ನೀಡುವುದಾಗಿ ಪ್ರಕಟಿಸಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…