ರಾಜ್ಯ

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಬಿಜೆಪಿಯ ಶಾಸಕ ಡಾ.ಸಿ.ಎನ್‌ ಅಶ್ವಥ್‌ನಾರಾಯಣ ಹೊಸ ವಿವಿಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವ ಕುರಿತು ನಿಲುವಳಿ ಸೂಚನೆ ಮಂಡಿಸಲು ಮುಂದಾದರು.

ಆಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ, ಹೊಸ ವಿವಿಗಳನ್ನು ಮುಚ್ಚುವಂತಹ ಯಾವುದೇ ತೀರ್ಮಾನವನ್ನು ಸರ್ಕಾರ ಮಾಡಿಲ್ಲ. ಯಾವುದೇ ಆತಂಕ ಬೇಡ ಎಂದರು.

ಈ ಹಿಂದೆ ಹೊಸ ವಿವಿಗಳನ್ನು ಮುಚ್ಚಬೇಕೋ ಅಥವಾ ಬೇಡವೋ ಎಂಬುದರ ಕುರಿತು ಉಪಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಿದೆ. ವರದಿ ಸಲ್ಲಿಕೆ ನಂತರ ನಿರ್ಧಾರ ಕೈಗೊಳ್ಳಲಾಗುವುದು. ಆದ್ದರಿಂದ ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡುವುದು ಸರಿಯಲ್ಲ ಎಂದರು.

ಮಧ್ಯ ಪ್ರವೇಶಿಸಿದ ವಿಪಕ್ಷ ನಾಯಕ ಆರ್‌.ಅಶೋಕ್‌, ಈ ವಿಚಾರವಾಗಿ ನಿಮ್ಮ ಸರ್ಕಾರದಲ್ಲೆ ದ್ವಂದ್ವ ನಿಲುವು ಇದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಮುಚ್ಚುತ್ತೇವೆ ಅಂತಾರೆ. ಸಿಎಂ ಇಲ್ಲ ಎನ್ನುತ್ತಾರೆ. ಬಾಗಿಲು ಮುಚ್ಚುತ್ತೇವೆ, ಬೀಗ ಹಾಕುವುದಿಲ್ಲ ಎಂಬಂತಿದೆ ನಿಮ್ಮ ಹೇಳಿಕೆ ಎಂದು ಕಿಚಾಯಿಸಿದರು.

ಅಶೋಕ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಸ್ತಾಪಿಸುವ ವಿಷಯ ಸಾರ್ವಜನಿಕ ಮಹತ್ವವನ್ನು ಹೊಂದಿರಬೇಕು. ಸಂಪುಟ ಉಪಸಮಿತಿಯ ವರದಿ ಇನ್ನು ಬಂದಿಲ್ಲ. ಈಗ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ವಾದಿಸಿದರು.

ಅಂತಿಮವಾಗಿ ಸ್ಪೀಕರ್‌ ಖಾದರ್‌ ಅವರು, ನಿಯಮ 69ರ ಅಡಿಯಲ್ಲಿ ಈ ಕುರಿತು ಮುಂದೆ ಅಲ್ಪ ಕಾಲಾವಧಿಯ ಚರ್ಚೆಗೆ ಅವಕಾಶ ನೀಡುವುದಾಗಿ ಪ್ರಕಟಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

4 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

4 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

4 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

4 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

7 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

7 hours ago