ರಾಜ್ಯ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಎಚ್‌ಸಿಎಂ ಸ್ಪಷ್ಟನೆ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಸ್ಪರ್ಧಿಸುವುದು ಇಲ್ಲ. ಯಾವುದೇ ಅಭ್ಯರ್ಥಿಯಾದರೂ ಸಹಾ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸಿದ್ಧತೆ ನಡೆಯುತ್ತಿದೆ. ಮಂತ್ರಿಗಳು ಸ್ಪರ್ಧಿಸಬೇಕು ಎಂಬುದರ ಬಗ್ಗೆ ಚರ್ಚೆಯಾಗಿಲ್ಲ. ಚುನಾವಣೆಗೆ ಮಂತ್ರಿಗಳು ಸ್ಪರ್ಧಿಸಬೇಕೆಂಬ ಒತ್ತಾಯವಿಲ್ಲ. ಗೆಲ್ಲುವ ಅವಕಾಶ ಆಧರಿಸಿ ಅಭ್ಯರ್ಥಿಗಳ ಆಯ್ಕೆಯಾಗಲಿದೆ. ನಾನು ಅಭ್ಯರ್ಥಿಯಲ್ಲ. ಯಾರೇ ಅಭ್ಯರ್ಥಿಯಾದರೂ ಗೆಲುವಿಗೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ನನ್ನ ಮಗ ಸುನಿಲ್ ಬೋಸ್ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ. ಸುನಿಲ್ ಬೋಸ್ ಗೆ 3 ಬಾರಿ ಎಂಎಲ್‌ಎ ಚುನಾವಣೆ ಟಿಕೆಟ್ ಕೈ ತಪ್ಪಿದ್ದರು ಎಲ್ಲಾ ಚುನಾವಣೆಗಳಲ್ಲೂ ಅಭ್ಯರ್ಥಿಗಳ ಗೆಲ್ಲಿಸಲು ಶ್ರಮಿಸಿದ್ದಾನೆ. ನನ್ನ ಮಗನಿಗೇ ಟಿಕೆಟ್ ಕೊಡಿ ಎಂದು ನಾನು ಶಿಫಾರಸ್ಸು ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ವರಿಷ್ಠರ ತೀರ್ಮಾನ ಅಂತಿಮವಾಗಲಿದೆ ಎಂದರು.

ಇದೇ ವೇಳೆ ಮಾಂಸಹಾರ ಸೇವಿಸಿ ಸುತ್ತೂರಿಗೆ ಕಾಂಗ್ರೆಸ್ ನಾಯಕರು ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ನಮಗೆ ಊಟ ಬಡಿಸಿದ್ರಾ? ಮಾಂಸ ಸಾರು ಬಡಿಸಿದ್ರಾ? ಬಿಜೆಪಿಯವರಿಗೆ ಜನರ ಮೂಲಭೂತ ಹಕ್ಕುಗಳ ಅರಿವಿಲ್ಲ. ಸಂವಿಧಾನದ ಆಶಯ ಗೊತ್ತಿಲ್ಲದವರು ಈ ರೀತಿ ಮಾತಾಡ್ತಿದಾರೆ. ನಮಗೆ ಬಿಜೆಪಿಯವರೇನು ಕೋಳಿ ಕೂದಿದ್ರಾ? ಮರಿ, ಮಾಂಸ ತಂದಿದ್ರಾ? ಲಿವರ್ ಫ್ರೈ ಮಾಡಿ ಕೊಟ್ಟಿದ್ದರಾ’’ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯ ಬಂದ್ ಕೇವಲ ರಾಜಕೀಯ ಸ್ಟಂಟ್
ಮಂಡ್ಯ ಪ್ರಗತಿಪರ ಜಿಲ್ಲೆಯಾಗಿದೆ, ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ಮಾಡಿಕೊಡಬಾರದು. ಮಂಡ್ಯ ಜನರು ಸೌಹಾರ್ದ, ಒಗ್ಗಟ್ಟು ಕಾಪಾಡಿಕೊಳ್ಳಬೇಕು. ಕಾಂಗ್ರೆಸ್ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಪಕ್ಷ ಜಾತಿ, ಧರ್ಮದ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ ಎಂದು ಎಚ್.ಸಿ. ಮಹದೇವಪ್ಪ ಹೇಳಿದರು.

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago