ರಾಜ್ಯ

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ ಆಫ್‌ ಹಿಸ್ಟೋರಿಕ್‌ ವೆಹಿಕಲ್ಸ್‌ ಆಫ್‌ ಇಂಡಿಯಾ (ಎಫ್ಎಚ್ ವಿಐ) ಸಹಯೋಗದಲ್ಲಿ ಪೌಲ್‌ ಜಾನ್‌ ರೆಸಾರ್ಟ್‌ ಮತ್ತು ಹೊಟೇಲ್‌ ಸಂಸ್ಥೆ ಭಾನುವಾರ ಆಯೋಜಿಸಿದ್ದ ಡ್ರಗ್ಸ್‌ ಮುಕ್ತ ಕರ್ನಾಟಕಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

“ಕರ್ನಾಟಕ ಮಾತ್ರವಲ್ಲ, ವಿಶ್ವದೆಲ್ಲೆಡೆ ಸಮಾಜ ಮಾದಕ ವ್ಯಸನದ ಜತೆ ಹೋಗುತ್ತಿದೆ. ಮಾದಕ ವಸ್ತುಗಳನ್ನು ಯಾರು ಬೆಂಬಲಿಸುತ್ತಾರೋ ಅವರು ಮನುಷ್ಯರಲ್ಲ, ಜನರ ಜೀವನದ ಜತೆ ಆಟವಾಡುತ್ತಾರೆ. ಅವರ ಭವಿಷ್ಯ, ಆರೋಗ್ಯವನ್ನು ನಾಶ ಮಾಡುತ್ತಾರೆ. ಇದನ್ನು ಮನಗಂಡು ನಮ್ಮ ಸರ್ಕಾರ ಕರ್ನಾಟಕವನ್ನು ಮಾದಕ ವ್ಯಸನ ಮಕ್ತ ರಾಜ್ಯವಾಗಿ ರೂಪಿಸುವ ಬಗ್ಗೆ ಸರ್ಕಾರ ಘೋಷಿಸಿತ್ತು,” ಎಂದರು.

“ಘೋಷಣೆಯಾದ ಕೂಡಲೇ ಕರ್ನಾಟಕ ಮಾದಕ ವ್ಯಸನ ಮುಕ್ತವಾಯಿತು ಎಂದು ಅರ್ಥವಲ್ಲ. ಅದರ ವಿರುದ್ಧ ಯುದ್ಧ ಆರಂಭಿಸಿದ್ದೇವೆ. ಸರ್ಕಾರ ಮತ್ತು ಪೊಲೀಸರು ಯುದ್ಧ ಮಾಡುತ್ತಿದ್ದಾರೆ. ಇದರ ಪರಿಣಾಮ ಕಳೆದ ವರ್ಷದಿಂದ 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಾವಿರಾರು ಜನರನ್ನು ಬಂಧಿಸಿದ್ದು, ಕೆಲವರು ಇನ್ನೂ ಜೈಲಿನಲ್ಲಿದ್ದಾರೆ. ವಿದೇಶದಿಂದ ಶಿಕ್ಷಣಕ್ಕಾಗಿ ಬಂದವರೂ ಇಂಥ ದುಷ್ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ,” ಎಂದು ಹೇಳಿದರು.

“ಡ್ರಗ್ಸ್ ದಂಧೆಕೋರರು ಎಷ್ಟು ಕೀಳು ಮಟ್ಟಕ್ಕೆ ಇಳಿದ್ದಾರೆ ಎಂದರೆ, ಶಾಲೆಗೆ ತೆರಳಿ ಚಾಕೋಲೇಟ್ ಮೂಲಕ ಮಕ್ಕಳಿಗೆ ಉಚಿತವಾಗಿ ಡ್ರಗ್ಸ್ ಹಂಚುತ್ತಿದ್ದಾರೆ. ಮಕ್ಕಳು ಅದಕ್ಕೆ ದಾಸರಾಗುವಂತೆ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ,” ಎಂದು ಹೇಳಿದ ಸಚಿವರು, ಮಾದಕ ವಸ್ತುಗಳ ಬಳಕೆಯಿಂದ ದೂರ ಇರಬೇಕು ಎಂದು ವಿದ್ಯಾರ್ಥಿ ಸಮುದಾಯ ಮತ್ತು ಐಟಿ ಪದವೀಧರರು ಸೇರಿದಂತೆ ಯುವ ಸಮುದಾಯವನ್ನು ಮನವಿ ಮಾಡಿದರು.

ಕಾರ್ಯಕ್ರದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎಸ್.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಫೆಡೆರೇಷನ್ ಆಫ್ ಹಿಸ್ಟೋರಿಕಲ್ ವೆಹಿಕಲ್ ಇಂಡಿಯಾದ ಡಾ.ರವಿಪ್ರಕಾಶ್, ಚಿತ್ರನಟ ಮದನ್ ಪಟೇಲ್ ಮತ್ತಿತರರು ಪಾಲ್ಗೊಂಡಿದ್ದರು.

ವಿಧಾನಸೌಧದ ಮುಭಾಗದಿಂದ ಹೊಟ ವಿಂಟೇಜ್‌ ಕಾರುಗಳ ಈ ಆಕರ್ಷಕ ಮೆರವಣಿಗೆ, ಬಿಗ್‌ ಬನಿಯಾನ್‌ ವೈನ್‌ಯಾರ್ಡ್‌ ಅಂಡ್‌ ರೆಸಾರ್ಟ್‌ ತನಕ ಸಾಗಿತು.ಸಾವಿರಾರು ಮಂದಿ ರಸ್ತೆ ಬದಿ ನಿಂತು ಮೆರವಣಿಗೆ ವೀಕ್ಷಿಸಿದರು.

ಆಂದೋಲನ ಡೆಸ್ಕ್

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

2 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

3 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

3 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

3 hours ago