ರಾಜ್ಯ

ವೀಣಾ ಕಾಶಪ್ಪನವರ್ ಗೆ ಟಿಕೆಟ್ ನೀಡದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಪಾಠ : ‌ಜಯಮೃತ್ಯುಂಜಯ  ಸ್ವಾಮೀಜಿ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ
ಬಾಗಲಕೋಟೆ ಕ್ಷೇತ್ರದಿಂದ ವೀಣಾ ಕಾಶಪ್ಪನವರ್ ಗೆ ಟಿಕೆಟ್ ನೀಡದಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಪಂಚಮಸಾಲಿ. ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದು ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಬಾಗಲಕೋಟೆ ಕ್ಷೇತ್ರದಿಂದ ಸಂಯುಕ್ತ ಪಾಟೀಲ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಕೆಪಿಸಿಸಿ ಪುನರ್ ಪರಿಶೀಲನೆ ಮಾಡಬೇಕು. ಒಂದು ವೇಳೆ ಇದೇ ಅಂತಿಮ ನಿರ್ಧಾರ ಎಂದರೆ, ನಾವು  ಕೂಡ ಚುನಾವಣೆಯಲ್ಲಿ ಒಮ್ಮತದ ನಿರ್ಣಯ ಮಾಡಬೇಕುತ್ತದೆ ಎಂದು ಸ್ವಾಮೀಜಿ ಹೇಳಿದ್ದಾರೆ.
ಬುಧವಾರ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಪ್ರಮುಖರನ್ನು ಭೇಟಿಯಾಗಿ, ವೀಣಾ ಕಾಶಪ್ಪನವರ್ ಗೆ ಏಕೆ ಟಿಕೆಟ್ ನೀಡಬೇಕು ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.
ಸಂಯುಕ್ತ ಪಾಟೀಲ್ ಅವರಿಗೆ ಟಿಕೆಟ್ ನೀಡಲು ನಮ್ಮ ಅಭ್ಯಂತರವಿಲ್ಲ. ಅವರಿಗೆ ಬಾಗಲಕೋಟೆ ಕ್ಷೇತ್ರ ಹೊರತುಪಡಿಸಿ ಬೇರೆ ಕಡೆ ಕೊಡಲಿ. ಆದರೆ, ಸ್ಥಳೀಯವರೇ ಆದ ವೀಣಾ
ಕಾಶಪ್ಪನವರ್ ಗೆ ಟಿಕೆಟ್ ನಿರಕಾರಿಸಿದ್ದರ ಉದ್ದೇಶವಾದರೂ ಏನು ಪ್ರಶ್ನಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಪಕ್ಷವನ್ನು ಸಂಘಟಿಸಿದ್ದರ ಪರಿಣಾಮ ಏಳು ವಿಧಾನಸಭಾ ಕ್ಷೇತ್ರದ ಪೈಕಿ ಐದು ಕಡೆ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಸಾಧ್ಯವಾಯಿತು. ಉತ್ತಮ ಸಂಘಟಿಕಿಯಾಗಿರುವ ವೀಣಾ ಕಾಶಪ್ಪನವರ್ ಗೆ ಟಿಕೆಟ್ ಕೊಡದಿರುವುದು ಇಡೀ ಪಂಚಮಸಾಲಿ ಸಮಾಜಕ್ಕೆ ಮಾಡಿದ ಅಪಮಾನ ಎಂದು ಸ್ವಾಮೀಜಿ ಆಕ್ರೋಶ ಹೊರಹಾಕಿದ್ದಾರೆ.
ಕಳೆದ ಐದು ವರ್ಷಗಳಿಂದ ಜಿಲ್ಲೆಯ ಎಲ್ಲಾ ಕಡೆ ಸಕ್ರೀಯರಾಗಿದ್ದುಕೊಂಡು ಪಕ್ಷವನ್ನು ಬಲಪಡಿಸುವಲ್ಲಿ ಕಾರ್ಯೋನ್ಮರಾಗಿದ್ದಾರೆ. ಈಗ ಏಕಾಏಕಿ ಟಿಕೆಟ್ ನಿರಕಾರಿಸಿದ್ದಕ್ಕೆ ಕೆಪಿಸಿಸಿ ಸ್ಪಷ್ಟವಾದ ಕಾರಣಗಳನ್ನು ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಸಂಯುಕ್ತ ಪಾಟೀಲ್ ಮೂಲತಃ ಬಿಜಾಪುರ ಜಿಲ್ಲೆಯವರು. ಹೊರಗಿನವರನ್ನು ಟಿಕೆಟ್ ಕೊಡುವ ಅಗತ್ಯವಾದರೂ ಏನಿತ್ತು? ಈ ಕೂಡಲೇ  ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ನಿರ್ಧಾರವನ್ನು ಹಿಂತೆಗೆದುಕೊಂಡು ನಿಷ್ಠಾವಂತ ರಾದ ವೀಣಾ ಕಾಶಪ್ಪನವರ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಮ್ಮ ಸಮುದಾಯವನ್ನು ನಿರ್ಲಕ್ಷ್ಯ ಮಾಡಿದ ಪರಿಣಾಮ ಫಲಿತಾಂಶ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಇದೇ ರೀತಿ ನಮ್ಮ ಸಮಾಜವನ್ನು ಕಡೆಗಣಿಸಿದರೆ,  ಕಾಂಗ್ರೆಸ್ ಪಕ್ಷದ ವಿರುದ್ಧ 28 ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಬೇಕಾಗುತ್ತದೆ ಎಂದು ನೇರ ಎಚ್ಚರಿಕೆ ನೀಡಿದ್ದಾರೆ.
ಪಂಚಮಸಾಲಿ ಸಮಾಜವನ್ನು 2A ಗೆ ಸೇರ್ಪಡೆ ಮಾಡಬೇಕು ಎಂದು ರಾಜ್ಯಾದ್ಯಂತ ನಡೆಸಿದ ಹೋರಾಟದಲ್ಲೂ ಅವರು ಸಕ್ರಿಯವಾಗಿಪಾಲ್ಗೊಂಡಿದ್ದರು. ಸಮಾಜದ ಬಗ್ಗೆ ಅಪಾರವಾದ ಕಳಕಳಿ ಇಟ್ಟುಕೊಂಡಿರುವ ಒಬ್ಬ ನಾಯಕಿಗೆ ಟಿಕೆಟ್ ನಿರಾಕರಣೆ ಮಾಡಿರುವುದು ಸರಿಯಲ್ಲ ಎಂದು ಸ್ವಾಮೀಜಿ ಆಕ್ಷೇಪಿಸಿದ್ದಾರೆ.
ಈ ಹಿಂದೆ 2019 ರ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಅಂದು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಶಿವನಂದಾದ್ ಪಾಟೀಲ್ ಅವರಿಗೆ ಸ್ಪರ್ಧೆ ಮಾಡುವಂತೆ ಕೇಳಿಕೊಂಡಿದ್ದರೂ ಹಿಂದೆ ಸರಿದಿದ್ದರು. ಕೊನೆಗೆ ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ವೀಣಾ ಕಾಶಪ್ಪನವರ್ ಸ್ಪರ್ಧೆ ಮಾಡಿದ್ದರು.
ಚುನಾವಣೆಯಲ್ಲಿ ಕೆಲವೇ ಕೆಲವು ಸಾವಿರ ಮತಗಳ ಅಂತರದಿಂದ ಪರಾಭವಗೊಂಡರೂ ಕ್ಷೇತ್ರದ ಜನತೆಯಿಂದ ಹಾಲಿ ಸಂಸದರಗಿಂತಲೂ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಕೂಡಲೇ ಕೆಪಿಸಿಸಿ ಮುಖಂಡರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇಡೀ ರಾಜ್ಯದಲ್ಲಿ ಪಂಚಮಸಾಲಿ ಸಮಾಜದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಒಂದು ವೇಳೆ ವೀಣಾ ಕಾಶಪ್ಪನವರ್ ಗೆ ಟಿಕೆಟ್ ನೀಡದಿದ್ದರೆ ಸದ್ಯದಲ್ಲೇ ಸಮಾಜದ ಮುಖಂಡರ ಜೊತೆಗೆ ಸಭೆ ನಡೆಸಿ ನಿರ್ಧಾರವನ್ನು ಪ್ರಕಟಿಸುವುದಾಗಿ ಜಯಮೃತ್ಯುಂಜಯ ಸ್ವಾಮೀಜಿ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

5 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

5 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

6 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

6 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

7 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

8 hours ago