ರಾಜ್ಯ

ಜನರಿಂದ ಪಡೆದ ಹೆಚ್ಚಿನ ಜಿಎಸ್‌ಟಿ ಅನ್ನು ಕೇಂದ್ರ ಮರಳಿ ನೀಡುವುದೇ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್‌ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.

ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ
ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಉತ್ತರಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ. 3.5 ರಷ್ಟು ನೀಡುತ್ತಿರುವುದು ಅನ್ಯಾಯ. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ, ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ರಾಜ್ಯ ದೊರೆಯುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತಸಚಿವರು ರದ್ದುಪಡಿಸಿದರು. ಆಯೋಗದ ಶಿಫಾರಸ್ಸಿನಂತೆ 5490 ಕೋಟಿ ಹಾಗೂ ಕೆರೆಗಳ ಅಭಿವೃದ್ದಿ 3000 ಕೋಟಿ, ರಸ್ತೆ ನಿರ್ಮಾಣಕ್ಕೆ 3000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೊಟಿ ರೂ.ಗಳ ಅನುದಾನವನ್ನು ನಮಗೆ ನೀಡಲಾಗಿಲ್ಲ. ಒಟ್ಟಾರೆ 17000 ಕೋಟಿ ರೂ. ಬರಬೇಕಾಗಿದ್ದ ಅನುದಾನ ಖೋತಾ ಆಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅಗತ್ಯಬಿದ್ದರೆ ನ್ಯಾಯಾಲಯದ ನೆರವು ಪಡೆದು ಕೇಂದ್ರದ ಅನುದಾನ ಪಡೆಯಲಾಗುವುದು ಎಂದರು.

ಇದನ್ನು ಓದಿ : ಸಮಾಜದಲ್ಲಿ ಅಸಮಾನತೆ ಬಯಸುವ ಬಿಜೆಪಿ : ಸಿಎಂ ಸಿದ್ದರಾಮಯ್ಯ ಟೀಕೆ

ಬಿಜೆಪಿ ಸಂಸದರಿಗೆ ರಾಜ್ಯದ ಹಿತ ಬೇಕಾಗಿಲ್ಲ
ಕೇಂದ್ರದ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸಲಾಗುವುದು. ಜಿಎಸ್ ಟಿ ಸರಳೀಕರಣದಿಂದ ರಾಜ್ಯಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ. ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ನಷ್ಟವಾಗಲಿದೆ. ಕೇಂದ್ರಸರ್ಕಾರ , ಎನ್ ಡಿ ಎ ಗೆ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್ ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದರು.

ಅಕ್ಟೋಬರ್ 7 ರೊಳಗೆ ಸಮೀಕ್ಷೆ ಪೂರ್ಣಗೊಳ್ಳುವ ಭರವಸೆಯಿದೆ
ರಾಜ್ಯದಲ್ಲಿ ಜಾತಿಸಮೀಕ್ಷೆ ಕಾರ್ಯದ ಪ್ರಗತಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಮೀಕ್ಷೆಯಲ್ಲಿ ಜಾತಿವಿವರ- ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ
ಮತಾಂತರ ಹಾಗೂ ಜಾತಿಒಡೆಯುವ ದೃಷ್ಠಿಯಿಂದ ಸಮೀಕ್ಷೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ. ಕಾಂತರಾಜು ವರದಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಎಂಬಿತ್ಯಾದಿ ಜಾತಿಗಳನ್ನು ನಮೂದಿಸಲಾಗಿತ್ತು. ಜನರು ತಮ್ಮ ಜಾತಿಯನ್ನು ಸ್ವಯಂಪ್ರೇರಿತರಾಗಿ ನಮೂದಿಸಿದರೆ ಅದಕ್ಕೆ ಸರ್ಕಾರ ಜವಾಬ್ದಾರವಾಗುವುದಿಲ್ಲ. ಆದರೆ ಆಯೋಗ, ಈ ಜಾತಿಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಆದ್ದರಿಂದ ಜನರು ಸ್ವಯಂಪ್ರೇರಿತವಾಗಿ ಹೇಳುವ ಜಾತಿಯ ಮಾಹಿತಿಯನ್ನು ಆಯೋಗ ಪಡೆಯಲಿದೆ. ಇದರಲ್ಲಿ ಜಾತಿ ಒಡೆಯುವ ಪ್ರಶ್ನೆಯಿಲ್ಲ. ಜನರನ್ನು ರಾಜಕೀಯ ಉದ್ದೇಶದಿಂದ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.

ರಾಜಕಾರಣಕ್ಕಾಗಿ ಆರೋಪ
ವಿಪಕ್ಷ ನಾಯಕ ಅಶೋಕ್ ರವರು ರೈತರ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರ ಇದ್ದರೂ ಸತ್ತಂತೆಯೇ ಎಂದು ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿ, ಅಶೋಕ್ ಅವರು ವಿಪಕ್ಷದ ನಾಯಕರಾಗಿದ್ದರೂ, ಆರ್ ಎಸ್ ಎಸ್ ನವರ ನಿರ್ದೇಶನದಂತೆ ಮಾತನಾಡುತ್ತಾರೆ. ಅಶೋಕ್ ರವರು ರಾಜಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

12 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

12 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

13 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

13 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

14 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

17 hours ago