ರಾಜ್ಯ

ಸೌಜನ್ಯ ಕೇಸ್‌ ತನಿಖೆಗೆ ಮುಂದಾಯ್ತಾ ಎಸ್‌ಐಟಿ? ಆರೋಪ ಹೊತ್ತವರಿಗೆ ಬುಲಾವ್‌

ಬೆಂಗಳೂರು : ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಈ ಹಿಂದೆ ಸಿಬಿಐನಿಂದ ಕ್ಲೀನ್‍ಚಿಟ್ ಪಡೆದಿದ್ದ ಆರೋಪಿಗಳನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಪುನಃ ತನಿಖೆಗೆ ಒಳಪಡಿಸಿದೆ.
ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದ ಉದಯ್‍ಕುಮಾರ್ ಜೈನ್, ಧೀರಜ್ ಕೆಲ್ಲಾ ಮತ್ತು ಮಲ್ಲಿಕ ಜೈನ್ ಅವರುಗಳಿಂದ ಬೆಳ್ತಂಗಡಿಯ ಎಸ್‍ಐಟಿ ಕಚೇರಿಯಲ್ಲಿ ಮಾಹಿತಿ ಪಡೆಯಲಾಗಿದೆ.

ಇತ್ತೀಚೆಗಷ್ಟೇ ಸೌಜನ್ಯ ತಾಯಿ ಎಸ್‍ಐಟಿಗೆ ದೂರು ನೀಡಿ ತಮ ಮಗಳ ಕೊಲೆ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಮೂವರನ್ನು ವಿಚಾರಣೆಗೆ ಗುರಿಪಡಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮಂಡ್ಯ: ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್‌ಮೇಲ್

ಪ್ರಕರಣದ ಹಿನ್ನೆಲೆ:
2012ರ ಅಕ್ಟೋಬರ್‍ನಲ್ಲಿ ಸೌಜನ್ಯ ಕಾಲೇಜಿನಿಂದ ಮನೆಗೆ ತೆರಳುವಾಗ ಕಾಣೆಯಾಗಿದ್ದರು. ಮರುದಿನ ಅವರ ಮೃತದೇಹ ಧರ್ಮಸ್ಥಳದ ಬಳಿಯ ಪಾಂಗಲದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಬೆಳ್ತಂಗಡಿ ಪೊಲೀಸರು ಆರಂಭಿಕ ತನಿಖೆ ನಡೆಸಿದ್ದು, ಸಂತೋಷ್ ರಾವ್ ಎಂಬಾತನನ್ನು ಬಂಧಿಸಿದ್ದರು. ನಂತರ ಈ ಪ್ರಕರಣವನ್ನು ಸಿಐಡಿ ಮತ್ತು 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು. ಆದರೆ 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್‍ನನ್ನು ಸಾಕ್ಷ್ಯಗಳ ಕೊರತೆಯಿಂದಾಗಿ ಖುಲಾಸೆಗೊಳಿಸಿತ್ತು. ತನಿಖೆಯಲ್ಲಿ ಲೋಪದೋಷಗಳಿವೆ ಎಂದು ನ್ಯಾಯಾಲಯ ಟೀಕಿಸಿತ್ತು. ಇದರಿಂದ ಸೌಜನ್ಯ ಕುಟುಂಬಸ್ಥರು ಮತ್ತು ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಈಗ ಎಸ್‍ಐಟಿ ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಉದಯ್ ಜೈನ್ ಸೇರಿದಂತೆ ಆರೋಪಿತರನ್ನು ವಿಚಾರಣೆಗೊಳಪಡಿಸಿದೆ. ಉದಯ್ ಜೈನ್ ಅವರಿಗೆ ಎಸ್‍ಐಟಿ ಕರೆ ಮಾಡಿ ಇಂದು ಬೆಳ್ತಂಗಡಿ ಕಚೇರಿಗೆ ಬರಲು ಸೂಚಿಸಿತ್ತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ವಿಚಾರಣೆಗೆ ಸಿದ್ಧನಿದ್ದೇನೆ. ಸತ್ಯವನ್ನು ಹೇಳುವವರಿಗೆ ಭಯವಿಲ್ಲ, ಸುಳ್ಳು ಹೇಳುವವರಿಗೇ ಭಯ ಇರುತ್ತದೆ ಎಂದು ಹೇಳಿದರು. ತಾವು ಈಗಾಗಲೇ ಸಿಬಿಐ ತನಿಖೆಯಲ್ಲಿ ಭಾಗಿಯಾಗಿದ್ದು, ಡಿಎನ್‍ಎ, ಬ್ರೈನ್ ಮ್ಯಾಪಿಂಗ್, ಮತ್ತು ಪಾಲಿಗ್ರಾಫ್ ಪರೀಕ್ಷೆಗಳಿಗೆ ಒಳಗಾಗಿದ್ದೇವೆ ಎಂದು ಒತ್ತಿ ಹೇಳಿದರು.

ಇನ್ನೊಮೆ ಬ್ರೈನ್ ಮ್ಯಾಪಿಂಗ್ ಮಾಡಲಿ, ನಾನು ಸಿದ್ಧನಿದ್ದೇನೆ. ಸಾಯುವವರೆಗೂ ತನಿಖೆಗೆ ತಯಾರಾಗಿದ್ದೇನೆ ಎಂದು ಉದಯ್ ಜೈನ್ ತಮ ನಿರಪರಾಧಿತ್ವವನ್ನು ಸಮರ್ಥಿಸಿಕೊಂಡರು. ಅವರು ಸೌಜನ್ಯ ಕುಟುಂಬದ ತಾಯಿಯ ಬಗ್ಗೆ ಗೌರವ ವ್ಯಕ್ತಪಡಿಸಿದರು ಕೂಡ ಕುಟುಂಬವು ತಮನ್ನು ಬಾಣವಾಗಿ ಬಳಸಿಕೊಂಡು ತಮ ಖ್ಯಾತಿಗೆ ಕಳಂಕ ತಂದಿದೆ ಎಂದು ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

8 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

8 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

9 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

9 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

10 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

11 hours ago