ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ.
ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ , ಮುಂದೆಯೂ ಇವರನ್ನೇ ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ ಎಂದರು.
ಬಿ.ವೈ ರಾಘವೇಂದ್ರ ಅವರಂತಹ ಲೋಕಸಭೆ ಸದಸ್ಯರನ್ನು ಪಡೆದ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ.
ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ. ಅವುಗಳು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಆಗ ಐಕ್ಯತೆ ಮೂಡುತ್ತದೆ ಎಂದರು.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…