ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು. ಆದರೆ, ಮೊದಲು ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಬಹುಮತ ಗಳಿಸುವ ಅಗತ್ಯವನ್ನು ಒತ್ತಿ ಹೇಳಿದ ಪ್ರಿಯಾಂಕ್ ಖರ್ಗೆ, ಪ್ರತಿಪಕ್ಷಗಳ ಮುಂದಿರುವ ಅತಿ ದೊಡ್ಡ ಸವಾಲು ಇದು ಎಂದಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಖರ್ಗೆ ಅವರು ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಹೇಳಿದ್ದರು. ಅವರು ದೇಶದ “ಮೊದಲ ದಲಿತ ಪ್ರಧಾನಿ” ಆಗಬಹುದು ಎಂದಿದ್ದರು. ಆದರೆ ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
ವಿರೋಧ ಪಕ್ಷಗಳ ಸಭೆಯ ನಂತರ ಎಂಡಿಎಂಕೆ ನಾಯಕ ವೈಕೊ ಸೇರಿದಂತೆ ಹಲವು ನಾಯಕರು ಇದನ್ನು ಖಚಿತಪಡಿಸಿದರು. ಆದರೆ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪವನ್ನು ನಯವಾಗಿಯೇ ತಿರಸ್ಕರಿಸಿದ ಖರ್ಗೆ, ಮೊದಲು ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯ. ಮೈತ್ರಿ ಬಲವನ್ನು ಹೆಚ್ಚಿಸುವುದು ಮುಖ್ಯ, ಉಳಿದೆಲ್ಲವನ್ನೂ ನಂತರ ನಿರ್ಧರಿಸಬಹುದು ಎಂದು ನಾಯಕರಿಗೆ ಹೇಳಿದ್ದರು.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕನ್ನಡಿಗನೊಬ್ಬ ಪ್ರಧಾನಿಯಾದರೆ ಬೇಡ ಎನ್ನುತ್ತೀರಾ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. “ಅವರು (ಮಲ್ಲಿಕಾರ್ಜುನ ಖರ್ಗೆ) ಪ್ರಧಾನಿ ಅಭ್ಯರ್ಥಿ ಆದರೆ ಒಳ್ಳೆಯದು, ಆದರೆ ನಾವು ಮೊದಲು ನಮ್ಮ ಮುಂದಿರುವ ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕು, ನಾವು ಕೇವಲ ಹಗಲುಗನಸು ಕಾಣಬಾರದು ಎಂದು ಹೇಳಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…