ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು. ಆದರೆ, ಮೊದಲು ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಬಹುಮತ ಗಳಿಸುವ ಅಗತ್ಯವನ್ನು ಒತ್ತಿ ಹೇಳಿದ ಪ್ರಿಯಾಂಕ್ ಖರ್ಗೆ, ಪ್ರತಿಪಕ್ಷಗಳ ಮುಂದಿರುವ ಅತಿ ದೊಡ್ಡ ಸವಾಲು ಇದು ಎಂದಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಖರ್ಗೆ ಅವರು ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಹೇಳಿದ್ದರು. ಅವರು ದೇಶದ “ಮೊದಲ ದಲಿತ ಪ್ರಧಾನಿ” ಆಗಬಹುದು ಎಂದಿದ್ದರು. ಆದರೆ ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
ವಿರೋಧ ಪಕ್ಷಗಳ ಸಭೆಯ ನಂತರ ಎಂಡಿಎಂಕೆ ನಾಯಕ ವೈಕೊ ಸೇರಿದಂತೆ ಹಲವು ನಾಯಕರು ಇದನ್ನು ಖಚಿತಪಡಿಸಿದರು. ಆದರೆ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪವನ್ನು ನಯವಾಗಿಯೇ ತಿರಸ್ಕರಿಸಿದ ಖರ್ಗೆ, ಮೊದಲು ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯ. ಮೈತ್ರಿ ಬಲವನ್ನು ಹೆಚ್ಚಿಸುವುದು ಮುಖ್ಯ, ಉಳಿದೆಲ್ಲವನ್ನೂ ನಂತರ ನಿರ್ಧರಿಸಬಹುದು ಎಂದು ನಾಯಕರಿಗೆ ಹೇಳಿದ್ದರು.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕನ್ನಡಿಗನೊಬ್ಬ ಪ್ರಧಾನಿಯಾದರೆ ಬೇಡ ಎನ್ನುತ್ತೀರಾ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. “ಅವರು (ಮಲ್ಲಿಕಾರ್ಜುನ ಖರ್ಗೆ) ಪ್ರಧಾನಿ ಅಭ್ಯರ್ಥಿ ಆದರೆ ಒಳ್ಳೆಯದು, ಆದರೆ ನಾವು ಮೊದಲು ನಮ್ಮ ಮುಂದಿರುವ ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕು, ನಾವು ಕೇವಲ ಹಗಲುಗನಸು ಕಾಣಬಾರದು ಎಂದು ಹೇಳಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…