ಬೆಂಗಳೂರು: ನಾನು ಯಾವುದೇ ತನಿಖೆಗೂ ಸಿದ್ಧ, ಯಾವ ತನಿಖೆಗೂ ಹೆದರಲ್ಲ ಎನ್ನುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ರಾಜ್ಯದಲ್ಲಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿದ್ದ ಅಧಿಸೂಚನೆಯನ್ನ ಸಂಪುಟ ಸಭೆಯಲ್ಲಿ ಹಿಂಪಡೆಯುವ ಮೂಲಕ ತಾವು ತಪ್ಪಿತಸ್ಥರು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವಿಟ್ ಮಾಡಿರುವ ಅವರು, ತಮ್ಮದೇನೂ ತಪ್ಪಿಲ್ಲದಿದ್ದರೆ ಸಿಬಿಐ ತನಿಖೆ ಬಗ್ಗೆ ಭಯವೇಕೆ ಸಿದ್ದರಾಮಯ್ಯನವರೇ? ಈ ರೀತಿ ಅಡ್ಡದಾರಿ ಹುಡುಕಿ ಅನಿವಾರ್ಯವಾದದ್ದನ್ನ ಮುಂದೂಡಿ ರಾಜ್ಯದ ಜನರ ಮುಂದೆ ಇನ್ನಷ್ಟು ಸಣ್ಣವರಾಗುವ ಬದಲು, ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ನಿಮ್ಮ ಸಲಹೆಗಾರರು, ವಕೀಲರು, ಸುತ್ತ ಮುತ್ತ ಇರುವ ಹಿತಶತೃಗಳು ಈಗಾಗಲೇ ನಿಮ್ಮ ದಾರಿ ತಪ್ಪಿಸಿ ಮರ್ಯಾದೆ ಕಳೆದಿದ್ದಾರೆ. ಈಗ ಮತ್ತೊಮ್ಮೆ ಅವರನ್ನು ನಂಬಿ ತಪ್ಪು ಹೆಜ್ಜೆ ಇಡಬೇಡಿ. ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಒಂದೇ ತಮ್ಮ ಮುಂದಿರುವ ಏಕೈಕ ದಾರಿ ಎಂದು ಹೇಳಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…