ಬೆಂಗಳೂರು: ನಾನು ಯಾವುದೇ ತನಿಖೆಗೂ ಸಿದ್ಧ, ಯಾವ ತನಿಖೆಗೂ ಹೆದರಲ್ಲ ಎನ್ನುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ರಾಜ್ಯದಲ್ಲಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿದ್ದ ಅಧಿಸೂಚನೆಯನ್ನ ಸಂಪುಟ ಸಭೆಯಲ್ಲಿ ಹಿಂಪಡೆಯುವ ಮೂಲಕ ತಾವು ತಪ್ಪಿತಸ್ಥರು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವಿಟ್ ಮಾಡಿರುವ ಅವರು, ತಮ್ಮದೇನೂ ತಪ್ಪಿಲ್ಲದಿದ್ದರೆ ಸಿಬಿಐ ತನಿಖೆ ಬಗ್ಗೆ ಭಯವೇಕೆ ಸಿದ್ದರಾಮಯ್ಯನವರೇ? ಈ ರೀತಿ ಅಡ್ಡದಾರಿ ಹುಡುಕಿ ಅನಿವಾರ್ಯವಾದದ್ದನ್ನ ಮುಂದೂಡಿ ರಾಜ್ಯದ ಜನರ ಮುಂದೆ ಇನ್ನಷ್ಟು ಸಣ್ಣವರಾಗುವ ಬದಲು, ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ನಿಮ್ಮ ಸಲಹೆಗಾರರು, ವಕೀಲರು, ಸುತ್ತ ಮುತ್ತ ಇರುವ ಹಿತಶತೃಗಳು ಈಗಾಗಲೇ ನಿಮ್ಮ ದಾರಿ ತಪ್ಪಿಸಿ ಮರ್ಯಾದೆ ಕಳೆದಿದ್ದಾರೆ. ಈಗ ಮತ್ತೊಮ್ಮೆ ಅವರನ್ನು ನಂಬಿ ತಪ್ಪು ಹೆಜ್ಜೆ ಇಡಬೇಡಿ. ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಒಂದೇ ತಮ್ಮ ಮುಂದಿರುವ ಏಕೈಕ ದಾರಿ ಎಂದು ಹೇಳಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…