ಬೆಂಗಳೂರು: ನನ್ನ ಮೇಲೆ ಹಾಗೂ ಹಿರಿಯರಾದ ಎಚ್.ಡಿ ದೇವೇಗೌಡರ ಮೇಲೆ ನಿನಗೆ ಗೌರವ ಇದ್ದರೆ 24 ಇಲ್ಲ, 48 ಗಂಟೆಗಳ ಒಳಗಾಗಿ ಬಂದು ಶರಣಾಗುವಂತೆ ನಿನಗೆ ಕೈ ಮುಗಿದು ಮನವಿ ಮಾಡುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಮನವಿ ಮಾಡಿದ್ದಾರೆ.
ನಗರದ ಜೆಡಿಎಸ್ ಕಚೇರಿಯ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ಎಷ್ಟು ದಿನ ಕಳ್ಳ ಪೊಲೀಸ್ ಆಟ, ಈ ನೆಲದ ಕಾನೂನಿದೆ, ಏಕೆ ಎದರಬೇಕು. ವಿದೇಶದಿಂದ ಬಂದು ತನಿಖೆಗೆ ಸಹಕರಿಸು ಎಂದು ಎಚ್ಡಿಕೆ ತಿಳಿ ಹೇಳಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಇದು ಎಲ್ಲರೂ ತಲೆ ತಗ್ಗಿಸುವ ಪ್ರಕರಣ, ಇದೊಂದು ಅಸಹ್ಯ ಪಡುವ ಪ್ರಕರಣವಾಗಿದೆ. ಹಾಗಾಗಿ ಸಾರ್ವಜನಿಕವಾಗಿ ನಾನು ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಈ ಪ್ರಕರಣದಲ್ಲಿ ನನ್ನನ್ನು ಹಾಗೂ ದೇವೇಗೌಡರನ್ನು ತಾಳೆ ಹಾಕಿದ್ದಾರೆ. ಹಾಗಾಗಿ ನಾನು ದೇವೇಗೌಡರಲ್ಲಿ ಮನವಿ ಮಾಡುತ್ತೇನೆ. ಪ್ರಜ್ವಲ್ ಎಲ್ಲೇ ಇದ್ದರು ಬಂದು ಬಂಧಿತರಾಗುವಂತೆ ತಿಳಿಸಿ ಎಂದು ಮನವಿ ಮಾಡಿರುವುದಾಗಿ ಹೇಳಿದರು.
ಡಿಕೆ ಶಿವಕುಮಾರ ಹಾಗೂ ದೇವರಾಜೇಗೌಡ ಮಾತನಾಡಿರುವ ಆಡಿಯೋ ಸಂಬಂಧ, ಡಿಕೆ ಶಿವಕುಮಾರ್ ಅವರು ಕುಮಾರಸ್ವಾಮಿ ಹೆಸರು ಹೇಳಿ ಎಂದಿದ್ದೀರಾ. ನೀವು ತಿಹಾರ್ ಜೈಲಿನಲ್ಲಿದ್ದಾಗ ನಾನು ನಿಮ್ಮನ್ನು ಭೇಟಿಯಾಗಿದ್ದೇನೆ. ಅದಾದ ನಾಲ್ಕು ದಿನಗಳ ಬಳಿಕ ನೀವು ಬಿಡುಗಡೆಗೊಂಡಿರಿ. ಈ ಬಗ್ಗೆ ಕಾಂಗ್ರೆಸ್ ನಾಯಕರು ಯಾಕೆ ಮಾತನಾಡುತ್ತಿಲ್ಲ. ನಾನಿಲ್ಲಿ ದೇವರಾಜೇಗೌಡರ ಬಗ್ಗೆ ವಕಾಲತ್ತು ವಹಿಸಲು ಬಂದಿಲ್ಲ. ಸತ್ಯಾಂಶ ತಿಳಿಸಲು ಬಂದಿದ್ದೇನೆ ಎಂದು ಕಿಡಿಕಾರಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…