ರಾಜ್ಯ

48 ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್‌ಗೆ ಕೈ ಮುಗಿದು ಮನವಿ ಮಾಡುವೆ ಎಂದ ಎಚ್‌ಡಿಕೆ

ಬೆಂಗಳೂರು: ನನ್ನ ಮೇಲೆ ಹಾಗೂ ಹಿರಿಯರಾದ ಎಚ್‌.ಡಿ ದೇವೇಗೌಡರ ಮೇಲೆ ನಿನಗೆ ಗೌರವ ಇದ್ದರೆ 24 ಇಲ್ಲ, 48 ಗಂಟೆಗಳ ಒಳಗಾಗಿ ಬಂದು ಶರಣಾಗುವಂತೆ ನಿನಗೆ ಕೈ ಮುಗಿದು ಮನವಿ ಮಾಡುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರಿಗೆ ಮನವಿ ಮಾಡಿದ್ದಾರೆ.

ನಗರದ ಜೆಡಿಎಸ್‌ ಕಚೇರಿಯ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ಎಷ್ಟು ದಿನ ಕಳ್ಳ ಪೊಲೀಸ್‌ ಆಟ, ಈ ನೆಲದ ಕಾನೂನಿದೆ, ಏಕೆ ಎದರಬೇಕು. ವಿದೇಶದಿಂದ ಬಂದು ತನಿಖೆಗೆ ಸಹಕರಿಸು ಎಂದು ಎಚ್‌ಡಿಕೆ ತಿಳಿ ಹೇಳಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣ ಇದು ಎಲ್ಲರೂ ತಲೆ ತಗ್ಗಿಸುವ ಪ್ರಕರಣ, ಇದೊಂದು ಅಸಹ್ಯ ಪಡುವ ಪ್ರಕರಣವಾಗಿದೆ. ಹಾಗಾಗಿ ಸಾರ್ವಜನಿಕವಾಗಿ ನಾನು ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಈ ಪ್ರಕರಣದಲ್ಲಿ ನನ್ನನ್ನು ಹಾಗೂ ದೇವೇಗೌಡರನ್ನು ತಾಳೆ ಹಾಕಿದ್ದಾರೆ. ಹಾಗಾಗಿ ನಾನು ದೇವೇಗೌಡರಲ್ಲಿ ಮನವಿ ಮಾಡುತ್ತೇನೆ. ಪ್ರಜ್ವಲ್‌ ಎಲ್ಲೇ ಇದ್ದರು ಬಂದು ಬಂಧಿತರಾಗುವಂತೆ ತಿಳಿಸಿ ಎಂದು ಮನವಿ ಮಾಡಿರುವುದಾಗಿ ಹೇಳಿದರು.

ಡಿಕೆ ಶಿವಕುಮಾರ ಹಾಗೂ ದೇವರಾಜೇಗೌಡ ಮಾತನಾಡಿರುವ ಆಡಿಯೋ ಸಂಬಂಧ, ಡಿಕೆ ಶಿವಕುಮಾರ್‌ ಅವರು ಕುಮಾರಸ್ವಾಮಿ ಹೆಸರು ಹೇಳಿ ಎಂದಿದ್ದೀರಾ. ನೀವು ತಿಹಾರ್‌ ಜೈಲಿನಲ್ಲಿದ್ದಾಗ ನಾನು ನಿಮ್ಮನ್ನು ಭೇಟಿಯಾಗಿದ್ದೇನೆ. ಅದಾದ ನಾಲ್ಕು ದಿನಗಳ ಬಳಿಕ ನೀವು ಬಿಡುಗಡೆಗೊಂಡಿರಿ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಯಾಕೆ ಮಾತನಾಡುತ್ತಿಲ್ಲ. ನಾನಿಲ್ಲಿ ದೇವರಾಜೇಗೌಡರ ಬಗ್ಗೆ ವಕಾಲತ್ತು ವಹಿಸಲು ಬಂದಿಲ್ಲ. ಸತ್ಯಾಂಶ ತಿಳಿಸಲು ಬಂದಿದ್ದೇನೆ ಎಂದು ಕಿಡಿಕಾರಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

3 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

4 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

16 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

17 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

18 hours ago