ಬೆಂಗಳೂರು: ನನ್ನ ಮೇಲೆ ಹಾಗೂ ಹಿರಿಯರಾದ ಎಚ್.ಡಿ ದೇವೇಗೌಡರ ಮೇಲೆ ನಿನಗೆ ಗೌರವ ಇದ್ದರೆ 24 ಇಲ್ಲ, 48 ಗಂಟೆಗಳ ಒಳಗಾಗಿ ಬಂದು ಶರಣಾಗುವಂತೆ ನಿನಗೆ ಕೈ ಮುಗಿದು ಮನವಿ ಮಾಡುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಮನವಿ ಮಾಡಿದ್ದಾರೆ.
ನಗರದ ಜೆಡಿಎಸ್ ಕಚೇರಿಯ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ಎಷ್ಟು ದಿನ ಕಳ್ಳ ಪೊಲೀಸ್ ಆಟ, ಈ ನೆಲದ ಕಾನೂನಿದೆ, ಏಕೆ ಎದರಬೇಕು. ವಿದೇಶದಿಂದ ಬಂದು ತನಿಖೆಗೆ ಸಹಕರಿಸು ಎಂದು ಎಚ್ಡಿಕೆ ತಿಳಿ ಹೇಳಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಇದು ಎಲ್ಲರೂ ತಲೆ ತಗ್ಗಿಸುವ ಪ್ರಕರಣ, ಇದೊಂದು ಅಸಹ್ಯ ಪಡುವ ಪ್ರಕರಣವಾಗಿದೆ. ಹಾಗಾಗಿ ಸಾರ್ವಜನಿಕವಾಗಿ ನಾನು ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಈ ಪ್ರಕರಣದಲ್ಲಿ ನನ್ನನ್ನು ಹಾಗೂ ದೇವೇಗೌಡರನ್ನು ತಾಳೆ ಹಾಕಿದ್ದಾರೆ. ಹಾಗಾಗಿ ನಾನು ದೇವೇಗೌಡರಲ್ಲಿ ಮನವಿ ಮಾಡುತ್ತೇನೆ. ಪ್ರಜ್ವಲ್ ಎಲ್ಲೇ ಇದ್ದರು ಬಂದು ಬಂಧಿತರಾಗುವಂತೆ ತಿಳಿಸಿ ಎಂದು ಮನವಿ ಮಾಡಿರುವುದಾಗಿ ಹೇಳಿದರು.
ಡಿಕೆ ಶಿವಕುಮಾರ ಹಾಗೂ ದೇವರಾಜೇಗೌಡ ಮಾತನಾಡಿರುವ ಆಡಿಯೋ ಸಂಬಂಧ, ಡಿಕೆ ಶಿವಕುಮಾರ್ ಅವರು ಕುಮಾರಸ್ವಾಮಿ ಹೆಸರು ಹೇಳಿ ಎಂದಿದ್ದೀರಾ. ನೀವು ತಿಹಾರ್ ಜೈಲಿನಲ್ಲಿದ್ದಾಗ ನಾನು ನಿಮ್ಮನ್ನು ಭೇಟಿಯಾಗಿದ್ದೇನೆ. ಅದಾದ ನಾಲ್ಕು ದಿನಗಳ ಬಳಿಕ ನೀವು ಬಿಡುಗಡೆಗೊಂಡಿರಿ. ಈ ಬಗ್ಗೆ ಕಾಂಗ್ರೆಸ್ ನಾಯಕರು ಯಾಕೆ ಮಾತನಾಡುತ್ತಿಲ್ಲ. ನಾನಿಲ್ಲಿ ದೇವರಾಜೇಗೌಡರ ಬಗ್ಗೆ ವಕಾಲತ್ತು ವಹಿಸಲು ಬಂದಿಲ್ಲ. ಸತ್ಯಾಂಶ ತಿಳಿಸಲು ಬಂದಿದ್ದೇನೆ ಎಂದು ಕಿಡಿಕಾರಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…