ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಮಹಿಳೆಯನ್ನು ಕಳೆದುಕೊಂಡ ಅವರ ಕುಟುಂಬಕ್ಕೆ ಈ ನೋವು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಸರ್ವ ಪ್ರಯತ್ನ ಮಾಡುತ್ತಿದ್ದು, ಸರ್ಕಾರ ಸಂವೇದನಾತ್ಮಕವಾಗಿದೆ. ಜನರು ಮಳೆಗಾಲ ಆರಂಭವಾಗುವವರೆಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಎಪಿಸಿಸಿಎಫ್ ದರ್ಜೆಯ ಅಧಿಕಾರಿ ನೇತೃತ್ವದ ತಂಡವನ್ನು ಹಾಸನ ಜಿಲ್ಲೆಗೆ ಕಳುಹಿಸಿ, ಅಧ್ಯಯನ ಮಾಡಿ ಮಾನವ-ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹುಡುಕಲು ಸೂಚಿಸುವುದಾಗಿ ಅವರು ಹೇಳಿದ್ದಾರೆ.
ಇತ್ತೀಚೆಗೆ ಬೇಲೂರು ತಾಲೂಕಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಯುವಕನ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ ತರುವಾಯ, ಬೇಲೂರು ಪಟ್ಟಣದಲ್ಲಿ ಸಭೆ ನಡೆಸಿ, ಜನರ ಅಹವಾಲು ಆಲಿಸಿದ್ದೇನೆ. ಜನರು ಶಾಂತಿಯಿಂದ ವರ್ತಿಸಿಬೇಕು ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕರ-ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮ ನಿರ್ಮಿಸುವ ಘೋಷಣೆಯನ್ನು ಬಜೆಟ್ ನಲ್ಲಿಯೇ ಮಾಡಲಾಗಿದೆ. ಆದಷ್ಟು ಶೀಘ್ರ ಆನೆ ಧಾಮ ನಿರ್ಮಿಸಿ ಮಾನವ-ಆನೆ ಸಂಘರ್ಷ ನಿಯಂತ್ರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ…
ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು…
ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್…
ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…
ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…
ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…