ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇಂದು (ಮೇ.೧೩) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಎರಡು ಜನರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳ ಮೇಲೆ ಜಾಮೀನು ನೀಡಿದೆ. ಜಾಮೀನು ಸಿಕ್ಕಿರುವ ಹಿನ್ನೆಲೆ ಶಾಸಕ ಎಚ್.ಡಿ ರೇವಣ್ಣ ನಾಳೆ(ಮೇ.೧೪) ಬಿಡುಗಡೆಯಾಗುವ ಸಾಧ್ಯತೆಯಿದೆ.
ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಸಿ.ವಿ ನಾಗೇಶ್ ಹಾಗೂ ಎಸ್ಐಟಿ ಪರ ಹೈಕೋರ್ಟ್ ಹಿರಿಯ ವಕೀಲೆ ಜಯನಾ ಕೊಠಾರಿ ಮತ್ತು ಅಶೋಕ್ ನಾಯಕ್ ವಾದ ಮಂಡಿಸಿದರು.
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…
ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…
ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್ನಂತೆ ಕಾಣುತ್ತಿದೆ. ಪೆಟ್ರೋಲ್ಗೆ ಶೇ.೨೦ ಮಿಶ್ರಣದ ಗುರಿ ಮತ್ತು…
ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…