ರಾಜ್ಯ

ಮಹಿಳೆ ಅಪಹರಣ ಪ್ರಕರಣ: ಎಚ್‌ಡಿ ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಇಂದು (ಮೇ.೧೩) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಎರಡು ಜನರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು  ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು  ಎಂಬ ಷರತ್ತುಗಳ ಮೇಲೆ ಜಾಮೀನು ನೀಡಿದೆ. ಜಾಮೀನು ಸಿಕ್ಕಿರುವ ಹಿನ್ನೆಲೆ ಶಾಸಕ ಎಚ್.ಡಿ ರೇವಣ್ಣ ನಾಳೆ(ಮೇ.೧೪) ಬಿಡುಗಡೆಯಾಗುವ ಸಾಧ್ಯತೆಯಿದೆ.

ಅರ್ಜಿದಾರರ ಪರ ಹೈಕೋರ್ಟ್‌ ಹಿರಿಯ ವಕೀಲ ಸಿ.ವಿ ನಾಗೇಶ್‌ ಹಾಗೂ ಎಸ್‌ಐಟಿ ಪರ ಹೈಕೋರ್ಟ್‌ ಹಿರಿಯ ವಕೀಲೆ ಜಯನಾ ಕೊಠಾರಿ ಮತ್ತು ಅಶೋಕ್‌ ನಾಯಕ್‌ ವಾದ ಮಂಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು | ಕಾಡಾನೆ ದಾಳಿಗೆ ಫಸಲು ಹಾನಿ ; ಸೂಕ್ತ ಪರಿಹಾರಕ್ಕೆ ಆಗ್ರಹ

ಹನೂರು : ಕಾಡಾನೆ ದಾಳಿಗೆ ಹಲವಾರು ವರ್ಷಗಳಿಂದ ಪೋಷಣೆ ಮಾಡಿದ್ದ ತೆಂಗು, ಬಾಳೆ, ಮಾವು, ಅಡಿಕೆ ಬೆಳೆ ನಾಶವಾಗಿ ರೈತನಿಗೆ…

6 mins ago

ಶಿಕ್ಷಕರೇ ಇಲ್ಲ, ಎಸ್‌ಎಸ್‌ಎಲ್‌ಸಿಯಲ್ಲಿ 94% ಬಂದಿದ್ದು ಹೇಗೆ? ಪರೀಕ್ಷೆಯಲ್ಲಿ ನಕಲು ನಡೆದಿದೆ ; ವಿಶ್ವನಾಥ್‌ ಆರೋಪ

ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ…

28 mins ago

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

1 hour ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

1 hour ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

2 hours ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

3 hours ago