ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವಿಚಾರ ಬಾರಿ ಸದ್ದು ಮಾಡುತ್ತಿದೆ. ಈ ಮಧ್ಯೆ ಮಹಿಳಾ ಸಿಎಂ ಬಗ್ಗೆ ಕೋಡಿ ಮಠದ ಶ್ರೀಗಳ ಹೇಳಿಕೆ ಕೂಡ ವೈರಲ್ ಆಗಿತ್ತು. ಸದ್ಯ ಈ ವದಂತಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೋಡಿಮಠದ ಶ್ರೀಗಳ ಹೇಳಿಕೆ ಹಾಗೂ ವೈರಲ್ ವಿಡಿಯೋ ಬಗ್ಗೆ ಗರಂ ಆಗಿದ್ದು, ಅದೆಲ್ಲಾ ನಗಣ್ಯ ಎಂದಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದರು.
ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ನಾನು ಕೂಡ ಪಕ್ಷದ ಶಿಸ್ತಿನ ಸಿಪಾಯಿ, ಇಂಥ ವಿಚಾರಗಳನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಮ್ಮ ಪಕ್ಷದ 135 ಶಾಸಕರು ತೀರ್ಮಾನಿಸುತ್ತಾರೆ ಎಂದು ಸಚಿವರು ಹೇಳಿದರು.
ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಇಂಥ ವಿಚಾರಗಳನ್ನ ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…