ರಾಜ್ಯ

ಮಹಿಳಾ ಸ್ನೇಹಿ ಗ್ರಾ.ಪಂ ಅಭಿಯಾನ | ಮಾ.8 ರ ಮಹಿಳಾ ದಿನದಂದು ಚಾಲನೆ ; ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 08ರಿಂದ 2025ರ ಜೂನ್‌ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು ವಾರ್ಡ್‌ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 3-ಹೆಚ್‌ ಅನ್ವಯ ಮಹಿಳೆಯರಿಗಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಮಹಿಳಾ ಸ್ವಸಹಾಯ ಹಾಗೂ ಸ್ತ್ರೀಶಕ್ತಿ ಸಂಘಗಳ ಸಹಭಾಗಿತ್ವದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ, ಚಟುವಟಿಕೆಗಳನ್ನು ಆಯೋಜಿಸಿ, ಅರ್ಥಪೂರ್ಣವಾಗಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಬೇಕೆಂದು ಸಚಿವರು ಹೇಳಿದ್ದಾರಲ್ಲದೆ, ಮಹಿಳೆಯರಿಂದ ಬರುವ ಬೇಡಿಕೆ, ಸಮಸ್ಯೆ ಹಾಗೂ ಪ್ರಶ್ನೆಗಳಿಗೆ ಸಂಬಂಧಿಸಿದ ಇಲಾಖೆಗಳು ಸ್ಪಂದಿಸುವ ಮೂಲಕ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಹೇಳಿದ್ದಾರೆ.

ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ನಡೆಸುವ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಉಪ ಸಮಿತಿಗಳ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ, ಪ್ರತಿ ಗ್ರಾಮದ ಮಹಿಳೆಯರ ಅಂಕಿ-ಸಂಖ್ಯೆಯ ವಿವರಗಳನ್ನು ಸಂಗ್ರಹಿಸಿ ಮಹಿಳಾ ಗ್ರಾಮಸಭೆಯಲ್ಲಿ ಮಂಡಿಸಬೇಕು ಗ್ರಾಮಗಳಲ್ಲಿನ ಎಲ್ಲಾ ಸ್ವಸಹಾಯ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಸ್ವ-ಸಹಾಯ ಸಂಘಗಳ ಎಲ್ಲಾ ಸದಸ್ಯರು ಮಹಿಳಾ ಗ್ರಾಮ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಖಾತರಿ ಪಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ.

ಮಹಿಳಾಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನದ 16 ವಾರಗಳ ಅವಧಿಯಲ್ಲಿ ವಾರಕ್ಕೊಂದರಂತೆ ಸಾಂಸ್ಕೃತಿಕ, ಮನರಂಜನೆ, ಕ್ರೀಡೆ, ಆರೋಗ್ಯ, ಪೌಷ್ಟಿಕಾಂಶ, ನೈರ್ಮಲ್ಯ, ಮಹಿಳಾ ಕಾನೂನುಗಳು ಮುಂತಾದ ವಿಷಯಗಳನ್ನು ಕಾರ್ಯಕ್ರಮಗಳನ್ನು ಆಯೋಜಿಸಲು ಸಚಿವರು ಸೂಚಿಸಿದ್ದಾರೆ. ಗ್ರಾಮಸಭೆ ನಡೆಸುವ ಸಮಯದಲ್ಲಿ ಆರೋಗ್ಯ ಶಿಬಿರ, ವಸ್ತು ಪ್ರದರ್ಶನ, ಸಸಿ ನೆಡುವ ಕಾರ್ಯಕ್ರಮ ಏರ್ಪಾಡು ಮಾಡಲು ಸಚಿವರು ಸಲಹೆ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

9 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

12 hours ago