ಬೆಳಗಾವಿ : ಗೃಹಲಕ್ಷ್ಮೀ ಹಣವನ್ನು ಮೇ ೧ರಂದು ಕೊಟ್ಟಿದ್ದೇವೆ ಕೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದು ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಮಹಿಳೆಯರ ಅಕೌಂಟ್ ಗೆ ಕ್ರೆಡಿಟ್ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ೨೦೦೦ ಸಾವಿರ ರೂಪಾಯಿ ವರ್ಗಾವಣೆ ಮಾಡುವ ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾಕಷ್ಟು ಚರ್ಚೆಯಾಗುತ್ತಿತ್ತು. ಮಹಿಳೆಯರು ಕೂಡ ಗೃಹಲಕ್ಷ್ಮೀ ಹಣ ಬರುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಹೀಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಮೇ ತಿಂಗಳ ಗೃಹಲಕ್ಷ್ಮಿ ಹಣ ಎಲ್ಲರ ಅಕೌಂಟ್ ಗೆ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷವೂ ಅಧಿಕಾರ ನಡೆಸುತ್ತದೆ ಜೊತೆಗೆ ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ. ಯಾರೂ ಎನೇ ಮಾತನಾಡಿದರೂ, ಬಿಜೆಪಿಯವರು ಹೇಳಿದರೂ ಕಿವಿಗೋಡಬೇಡಿ ಎಂದು ಹೇಳಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…