ಬೆಂಗಳೂರು: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೂಪಿಸಿದ ಶೇ.33ರಷ್ಟು ಮಹಿಳಾ ಮೀಸಲಾತಿ ಫಲವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಹೆಚ್ಚಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಇಂದು ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ʼಅಂತರಾಷ್ಟ್ರೀಯ ಮಹಿಳಾ ದಿನಾವರಣೆʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಡಿರುವ ಎಲ್ಲಾ ಯೋಜನೆಗಳು, ಬಿ.ಎಸ್.ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮಿ ಯೋಜನೆಗಳು ಮಹಿಳಾ ಪ್ರಧಾನವಾಗಿವೆ ಎಂದು ಹೇಳಿದರು.
ಬಿಜೆಪಿ ಪಕ್ಷದಲ್ಲಿ ಮಾತ್ರ ಮಹಿಳೆಯರಿಗೆ ರಾಜಕೀಯದಲ್ಲಿ ಸಮಾನತೆ ಸಿಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಆದ ಕಾರಣ ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಿಜೆಪಿಯತ್ತ ವಾಲುತ್ತಿದ್ದಾರೆ ಎಂದು ತಿಳಿಸಿದರು.
ಈ ಸಮಯದಲ್ಲಿ ಮಹಿಳಾ ಸಾಧಕಿಯರನ್ನು ಸನ್ಮಾನಿಸಲಾಯಿತು. ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ, ರಾಜ್ಯ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಶಾಂತಲಾ ಭಟ್, ಪೂರ್ಣಿಮಾ ಪ್ರಕಾಶ್, ವಸುಧಾ ಕುಲಕರ್ಣಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…