ರಾಜ್ಯ

ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ: IAS-IPS ಅಧಿಕಾರಿಗಳಿಗೆ ಸಿಎಂ ಕರೆ

ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ ಕರೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಮಾತನಾಡಿದರು.

ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು, ಸಂದರ್ಭಗಳನ್ನು ನಿರ್ವಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.

ಆಡಳಿತಾಂಗದಲ್ಲಿ IAS-IPS-IRS-IFS ಅಧಿಕಾರಿಗಳ ಜವಾಬ್ದಾರಿ ಹೆಚ್ಚು. ನಾವು ಕಾನೂನುಗಳನ್ನು ರಚಿಸಿ, ಜಾರಿ ಆಗುವ ದಿಕ್ಕಿನಲ್ಲಿ ನಿರಂತರ ನಿಗಾ ವಹಿಸುತ್ತೇವೆ. ಅಧಿಕಾರಿ ವರ್ಗ ಸಮಾಜಕ್ಕೆ ಪೂರಕವಾಗಿ ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಂವಿಧಾನ‌ ಜಾರಿ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಆಡಿದ ಮಾತುಗಳನ್ನು ಉಲ್ಲೇಖಿಸಿದ ಸಿಎಂ, ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ-ಆರ್ಥಿಕ‌ ಸ್ವಾತಂತ್ರ್ಯ ಒದಗಿಸಬೇಕು. ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುವುದಿಲ್ಲ ಎಂದರು.

ಭಾರತದ ಆರ್ಥಿಕತೆ ಕುಸಿತ ಕಂಡಿದ್ದಾಗ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಿದರು. ದೇಶದ ಆರ್ಥಿಕ‌ ಬೆಳವಣಿಗೆ ಆಗಿ ಇದರ ಲಾಭ ದೇಶದ ಜನರಿಗೆ ಲಭಿಸುವಂತೆ ಮಾಡಿದರು. ಸಂವಿಧಾನದ ನಿರ್ದೇಶಕ ತತ್ವಗಳಾದ ಸಮಾನತೆ, ಜಾತ್ಯತೀತತೆ, ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ದೇಶದ ಜನರ ಮೂಲಭೂತ ಹಕ್ಕುಗಳನ್ನಾಗಿ ಮಾಡಿದರು. ಮಾಹಿತಿ ಹಕ್ಕು, ಆಹಾರದ ಹಕ್ಕು, ಶಿಕ್ಷಣದ ಹಕ್ಕುಗಳನ್ನು ಕಡ್ಡಾಯ ಮಾಡಿದರು. ಆ ಮೂಲಕ ಸಮಾನತೆಯೆಡೆಗೆ ದೇಶವನ್ನು ಮುನ್ನಡೆಸಿದರು ಎಂದು ವಿವರಿಸಿದರು.

ಸಮಾನ ಅವಕಾಶಗಳು ಸಿಕ್ಕಾಗ ಸಮಾನತೆ ದಿಕ್ಕಿಗೆ ನಾವು ಸಾಗಬಹುದು ಎನ್ನುವ ಕಾರಣದಿಂದಲೇ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಜನರ ಕೈಯಲ್ಲಿ ಕಾಸು ಇರಬೇಕು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಇದಕ್ಕೆ ತಕ್ಕಂತೆ ರಾಜ್ಯದ ಜನರ ಜೇಬಲ್ಲಿ ಹಣ ಇರುವ ಗ್ಯಾರಂಟಿಗಳನ್ನು ನಾವು ಜಾರಿ ಮಾಡಿದೆವು. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ಜನರಿಗೆ ಹಣ ತಲುಪಿಸುತ್ತಿದ್ದೇವೆ. ಇದು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದರು.

ಇಲ್ಲಿಯವರೆಗೂ 35 ಸಾವಿರ ಕೋಟಿ ರೂಪಾಯಿಗಳನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಖರ್ಚು ಮಾಡಿದ್ದೇವೆ. ಈಗಲಾದರೂ ನಂಜುಂಡಪ್ಪ ಅವರ ವರದಿಯಲ್ಲಿನ ಪ್ರಾದೇಶಿಕ ಅಸಮಾನತೆ ಕಡಿಮೆಯಾಗಿದೆಯಾ ಎನ್ನುವುದನ್ನು ಅಧ್ಯಯನ ನಡೆಸಿ ವರದಿ ನೀಡಿಲು ಗೋವಿಂದರಾವ್ ಅವರ ಸಮಿತಿ ರಚಿಸಲಾಗಿದೆ. ಏಕೆ ಉತ್ತರ ಕರ್ನಾಟಕದ ಅಸಮಾನತೆ ಕಡಿಮೆ ಆಗಿಲ್ಲ ಎನ್ನುವ ಬಗ್ಗೆಯೂ ಬೆಳಗಾವಿ ಅಧಿವೇಶನದಲ್ಲೂ ಚರ್ಚಿಸಿದ್ದೇವೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ನೀವೂ ಅಷ್ಟೆ ಗಂಭೀರವಾಗಿ ಪರಿಗಣಿಸಿ ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಶ್ರಮಿಸಬೇಕು ಎಂದರು.

ಯುವ ಜನತೆ ನಮ್ಮ ಆಸ್ತಿ: ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸುವ ಸವಾಲು IPS ಅಧಿಕಾರಿಗಳು ಸ್ವೀಕರಿಸಬೇಕು

ಯುವ ಜನತೆ ನಮ್ಮ ಸಮಾಜದ ಆಸ್ತಿ. ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸುವ ಸವಾಲನ್ನು IPS ಅಧಿಕಾರಿಗಳು ಸ್ವೀಕರಿಸಬೇಕು. ಡ್ರಗ್ಸ್ ಹಾವಳಿ, ಅಪರಾಧಿಕ ಜಗತ್ತಿನ‌ ಕಡೆಗೆ ಯುವ ಜನತೆ ಆಕರ್ಷಿತರಾಗದಂತೆ ಎಚ್ಚರ ವಹಿಸಿ. ತಂತ್ರಜ್ಞಾನ ಮತ್ತು ವಿಜ್ಞಾನದ ಪ್ರಗತಿ ಆಗುತ್ತಿದೆ. ಈ ಪ್ರಗತಿ ಅಪರಾಧಗಳಿಗೆ ಬಳಕೆ ಆಗದೆ ಯುವ ಜನರ ಭವಿಷ್ಯ ರೂಪಿಸಲು ಸಹಕಾರಿ ಆಗುವಂತೆ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ನೀವು ಅಧಿಕಾರಿ ವರ್ಗ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ರಾಜ್ಯದಲ್ಲಿ ಅದ್ಭುತ ಬದಲಾವಣೆ, ಸುಧಾರಣೆಗಳನ್ನು ತರಲು ಸಾಧ್ಯವಿದೆ. ಇದಕ್ಕಾಗಿ ನಿಮ್ಮ ಕಾರ್ಯಕ್ಷಮತೆ ಬಳಕೆಯಾಗಲಿ ಎಂದರು.

ಅಧಿಕಾರಿ ವರ್ಗಕ್ಕೆ ನಮ್ಮ ಸಲಹೆಯ ಅಗತ್ಯ ಇಲ್ಲ. ನೀವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡರೆ ಸಾಕು. ಭ್ರಷ್ಟಾಚಾರ ವ್ಯವಸ್ಥೆ ಕಡಿಮೆ ಆಗುವ ಬದಲಿಗೆ ಹೆಚ್ಚಾಗುತ್ತಿರುವುದು ದುರಂತ. ಆದ್ದರಿಂದ ನಾವೆಲ್ಲರೂ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ ಎಂದು ಕರೆ ನೀಡಿದರು.

ನಮ್ಮ-ನಿಮ್ಮ ಉದ್ದೇಶ ಒಂದೇ. ಸಮಾಜದ ಪ್ರಗತಿ ಮತ್ತು ಆರೋಗ್ಯಕರ ಬದಲಾವಣೆ. ಇದಕ್ಕಾಗಿ ನಮ್ಮ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳೋಣ ಎಂದು ಕರೆ ನೀಡಿದರು.

ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಸುಳ್ಳನ್ನು ಪದೇ ಪದೇ ಹರಡಿಸುತ್ತಿದ್ದಾರೆ. ಇದು ಸುಳ್ಳು ಎನ್ನುವುದು ನಿಮಗೇ ಗೊತ್ತಿದೆ. ಹಿಂದಿನ ಸರ್ಕಾರ ಬಜೆಟ್ ಒಪ್ಪಿಗೆ ಪಡೆಯದೆ ಯದ್ವಾ ತದ್ವಾ ಟೆಂಡರ್ ಕರೆದು ಹಾನಿ ಮಾಡಿತ್ತು. ಸುಮಾರು 39 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿ ಹೋಗಿದ್ದರು. ಜೊತೆಗೆ ಕೇಂದ್ರ ಸರ್ಕಾರದಿಂದ ನಮಗೆ ಅನ್ಯಾಯ ಮುಂದುವರೆದಿದೆ. ಇದೆಲ್ಲವನ್ನೂ ಸರಿದೂಗಿಸಿಕೊಂಡು ಅಭಿವೃದ್ಧಿಗೂ ಹಣ ಒದಗಿಸುತ್ತಿದ್ದೇವೆ. ಆದ್ದರಿಂದ ಇಲಾಖೆಗಳಲ್ಲಿರುವ ಹಣ ಹೆಚ್ಚು ಸೋರಿಕೆ ಆಗದಂತೆ ತಡೆಯುವ ಜವಾಬ್ದಾರಿ ಮತ್ತು ಕರ್ತವ್ಯ ನಿಮ್ಮ ಮೇಲಿದೆ ಎಂದರು.

ಹಣ ಸಂಗ್ರಹಿಸುವ ಇಲಾಖೆಗಳು ಮತ್ತು ಹಣ ಖರ್ಚು ಮಾಡುವ ಇಲಾಖೆಗಳೆರಡೂ ಸಮತೂಕದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಎಲ್ಲಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ಜಮೀರ್ ಅಹಮದ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

3 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

7 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

7 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

8 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

9 hours ago