ರಾಜ್ಯ

ಜವಾಬ್ದಾರಿಯಿಂದ ಕೆಲಸ ಮಾಡಿ; ಅಧಿಕಾರಿಗಳಿಗೆ ಎನ್ .ಚಲುವರಾಯಸ್ವಾಮಿ ಸೂಚನೆ

ಧಾರವಾಡ : ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಜವಾಬ್ದಾರಿಯುತವಾಗಿ ಕೆಲಸಮಾಡಿ ಎಂದು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ ಸೂಚಿಸಿದ್ದಾರೆ.

ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ ಎಂದು ಸಚಿವರು ತಿಳಿಸಿದರು.

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೆಳಗಾವಿ ವಿಭಾಗದ 7 ಜಿಲ್ಲೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಕೃಷಿ ಸಚಿವರು, ಹೈಟೆಕ್ ಹಾರ್ವೆಸ್ಟ್‌ ಹಬ್ ,ಕೃಷಿ ಭಾಗ್ಯ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ ಎಂದು ಅವರು ಹೇಳಿದರು..

ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಫಾಸ್ಪರಿಕ್ ಆಮ್ಲದ ಬೆಲೆ ಹೆಚ್ಚಿರುವುದರಿಂದ, ಡಿಎಪಿಗೆ ಪರ್ಯಾಯಾವಾಗಿ ಕಾಂಪ್ಲೆಕ್ಸ್ ಗೊಬ್ಬರ, 15 15 15, 17 17 17 ಹಾಗೂ 19 19 19 ಪರ್ಯಾಯಾವಾಗಿ ಎಲ್ಲಾ ಬೆಳೆಗಳಿಗೂ ಉಪಯೋಗಿಸಬೇಕು. ಪೊಟಾಷ್ ಇರುವುದರಿಂದ ಸಮತೋಲನ ಗೊಬ್ಬರ ಒದಗಿಸಲಿದ್ದು, ಪೊಟಾಷ್ ನಿಂದ ಬೆಳೆಗಳಿಗೆ ರೋಗ, ಕೀಟ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಮಣ್ಣಿನ ಫಲವತ್ತತೆ ಸಹ ಕಾಪಾಡಿ ಸಮತೋಲನದಲ್ಲಿ ಬೆಳೆಗಳಿಗೆ ಪೋಷಾಕಾಂಶ ಒದಗಿಸುತ್ತದೆ ಈ ಹಿನ್ನಲೆಯಲ್ಲಿ ರೈತರಿಗೆ ಪರ್ಯಾಯ ಗೊಬ್ಬರದ ಬಗ್ಗೆ ಪ್ರಚಾರ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಯಾಂತ್ರೀಕರಣ ಯೋಜನೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು, ಹೊಸ ತಳಿಗಳ ಪ್ರಯೋಜನದ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಹಾಗೂ ಹಾರ್ವೇಸ್ಟರ್ ಹಬ್ ಗಳನ್ನು ಎಲ್ಲಾ ಜಿಲ್ಲೆಗಳಲ್ಲೂ ಅನುಷ್ಠಾನಗೊಳಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಮಣ್ಣಿನ ಪರೀಕ್ಷೆ ಅತ್ಯಂತ ಮುಖ್ಯವಾದದ್ದು, ಇದನ್ನು ಹೆಚ್ಚಾಗಿ ಅನುಷ್ಠಾನ ಮಾಡಿ ರಾಸಾಯನಿಕಗಳ ಮಿತ ಬಳಕೆ ಹಾಗೂ ನ್ಯಾನೋ ಗೊಬ್ಬರ ಬಳಕೆ ಅನುಕೂಲಗಳ ಬಗ್ಗೆ ಜಾಗೃತಿ ಮೂಡಿಸಿ ಎಂದು ಅವರು ಸೂಚಿಸಿದರು.

ಎಲ್ಲಾ ಅಧಿಕಾರಿಗಳು ರೈತರ ಬಳಿ ಹೋಗಿ ಸಮಸ್ಯೆ ಆಲಿಸಬೇಕು, ಕೃಷಿಕರ ಜಮೀನುಗಳಿಗೆ ಭೇಟಿ ನೀಡದ ,ಅವರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವರು ಎಚ್ಚರಿಕೆ ನೀಡಿದರು.

ಬೆಳೆ ವಿಮೆ, ಕಬ್ಬಿನಲ್ಲಿ ಗೊಣ್ಣೆಹುಳ ನಿರ್ವಹಣೆ, ಶೇಂಗಾ ಬೆಳೆಯಲ್ಲಿ ಲಘು ಪೋಷಕಾಂಶಗಳ ಬಳಕೆ , ತೊಗರಿ ಬೆಳೆಯಲ್ಲಿ ಇಳುವರಿ ಹೆಚ್ಚಳ ತಾಂತ್ರಿಕತೆಯ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವಂತೆ ಸಚಿವರು ನಿರ್ದೇಶನ ನೀಡಿದರು..

ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಗೊಂದಲವಾಗದಂತೆ ಮುಂಜಾಗ್ರತೆ ವಹಿಸಲು ಸೂಚನೆ ನೀಡಿದ ಸಚಿವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ವ್ಯವಸ್ಥಿತ ಹಂಚಿಕೆಗೆ ನಿರ್ದೇಶಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಸೆಕೆಂಡರಿ ಅಗ್ರಿಕಲ್ಚರಲ್ ನಿರ್ದೇಶಕ ವೆಂಕಟರಮಣರೆಡ್ಡಿ ಉಪಸ್ಥಿತರಿದ್ದರು..

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

15 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

15 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

15 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

15 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

15 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago