Mysore
23
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

ಬೂತ್ ಮಟ್ಟದಲ್ಲಿ ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು: ಯಡಿಯೂರಪ್ಪ ಸಲಹೆ

ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಇಂದು ಬಾಗಲಕೋಟೆ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿರಿಯರ ಅನುಭವದ ಜೊತೆ ಯುವಕರ ಉತ್ಸಾಹ ಸೇರಿದರೆ ಸಂಘಟನೆ ಬಲಿಷ್ಠವಾಗಲು ಸಾಧ್ಯ ಎಂದು ಅವರು ವಿಶ್ಲೇಷಿಸಿದರು. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂದು ಅವರು ನುಡಿದರು.

ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಎಲ್ಲ ಮಹನೀಯರನ್ನು ನೆನಪಿಸಿಕೊಂಡರು. 1980ರಲ್ಲಿ ಆರಂಭವಾದ ನಮ್ಮ ಪಕ್ಷದ ಪ್ರಯಾಣ ಜನರ ಆಶೀರ್ವಾದ ಮತ್ತು ನಿಮ್ಮ ಬೆಂಬಲದಿಂದ ಇವತ್ತು ಬಲಿಷ್ಠ ಮತ್ತು ಇಷ್ಟು ಎತ್ತರಕ್ಕೆ ಬೆಳೆದಿದೆ ಎಂದು ಅವರು ತಿಳಿಸಿದರು. ಜನರೇ ನಮ್ಮ ದೇವರು, ಜನಸೇವೆಯೇ ನಮ್ಮ ಕಾಯಕ. ಅವರ ಮುಂದೆ ನಾವು ನಮ್ರವಾಗಿ ಇರಬೇಕು ಎಂದು ಸೂಚಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ ಶ್ರಮ, ಅಡ್ವಾಣಿಯವರ ಸಂಘಟನಾ ಶಕ್ತಿ ಪ್ರತಿಯೊಬ್ಬ ಕಾರ್ಯಕರ್ತನ ಹೃದಯದಲ್ಲಿದೆ. ಪಕ್ಷದ ಬೆಳವಣಿಗೆಗೆ ಅನೇಕ ಮಹನೀಯರು ಶ್ರಮಿಸಿದ್ದಾರೆ ಎಂದು ವಿವರಿಸಿದರು. ಪಕ್ಷದ ಜಿಲ್ಲಾ ಪ್ರಮುಖರು, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

Tags:
error: Content is protected !!