ರಾಜ್ಯ

ಬೂತ್ ಮಟ್ಟದಲ್ಲಿ ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು: ಯಡಿಯೂರಪ್ಪ ಸಲಹೆ

ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಇಂದು ಬಾಗಲಕೋಟೆ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿರಿಯರ ಅನುಭವದ ಜೊತೆ ಯುವಕರ ಉತ್ಸಾಹ ಸೇರಿದರೆ ಸಂಘಟನೆ ಬಲಿಷ್ಠವಾಗಲು ಸಾಧ್ಯ ಎಂದು ಅವರು ವಿಶ್ಲೇಷಿಸಿದರು. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂದು ಅವರು ನುಡಿದರು.

ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಎಲ್ಲ ಮಹನೀಯರನ್ನು ನೆನಪಿಸಿಕೊಂಡರು. 1980ರಲ್ಲಿ ಆರಂಭವಾದ ನಮ್ಮ ಪಕ್ಷದ ಪ್ರಯಾಣ ಜನರ ಆಶೀರ್ವಾದ ಮತ್ತು ನಿಮ್ಮ ಬೆಂಬಲದಿಂದ ಇವತ್ತು ಬಲಿಷ್ಠ ಮತ್ತು ಇಷ್ಟು ಎತ್ತರಕ್ಕೆ ಬೆಳೆದಿದೆ ಎಂದು ಅವರು ತಿಳಿಸಿದರು. ಜನರೇ ನಮ್ಮ ದೇವರು, ಜನಸೇವೆಯೇ ನಮ್ಮ ಕಾಯಕ. ಅವರ ಮುಂದೆ ನಾವು ನಮ್ರವಾಗಿ ಇರಬೇಕು ಎಂದು ಸೂಚಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ ಶ್ರಮ, ಅಡ್ವಾಣಿಯವರ ಸಂಘಟನಾ ಶಕ್ತಿ ಪ್ರತಿಯೊಬ್ಬ ಕಾರ್ಯಕರ್ತನ ಹೃದಯದಲ್ಲಿದೆ. ಪಕ್ಷದ ಬೆಳವಣಿಗೆಗೆ ಅನೇಕ ಮಹನೀಯರು ಶ್ರಮಿಸಿದ್ದಾರೆ ಎಂದು ವಿವರಿಸಿದರು. ಪಕ್ಷದ ಜಿಲ್ಲಾ ಪ್ರಮುಖರು, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…

48 seconds ago

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…

21 mins ago

ಬಂಡೀಪುರದಲ್ಲಿ ಸಫಾರಿಗರಿಗೆ ಹುಲಿ ದರ್ಶನ: ಜಿಂಕೆ ಬೇಟೆಯಾಡಿದ ಸೀಳು ನಾಯಿ

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…

31 mins ago

ಚಾರಣದಲ್ಲಿ ಮಾರ್ಗಸೂಚಿ ಕಟ್ಟುನಿಟ್ಟು ಅನುಸರಣೆಗೆ ಕ್ರಮ ಅಗತ್ಯ

ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…

1 hour ago

ಐತಿಹಾಸಿಕ ಸಂಸತ್ ಅಧಿವೇಶನಕ್ಕೆ ದಿನಗಣನೆ!

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ  ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್, ಬಿಜೆಪಿ ಪಾಳೆಯದಲ್ಲಿ ಮಿಶ್ರಭಾವನೆ ಹುಟ್ಟು ಹಾಕಿದ ಉಪಚುನಾವಣೆ

ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…

2 hours ago