ರಾಜ್ಯ

ಬೂತ್ ಮಟ್ಟದಲ್ಲಿ ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು: ಯಡಿಯೂರಪ್ಪ ಸಲಹೆ

ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಇಂದು ಬಾಗಲಕೋಟೆ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿರಿಯರ ಅನುಭವದ ಜೊತೆ ಯುವಕರ ಉತ್ಸಾಹ ಸೇರಿದರೆ ಸಂಘಟನೆ ಬಲಿಷ್ಠವಾಗಲು ಸಾಧ್ಯ ಎಂದು ಅವರು ವಿಶ್ಲೇಷಿಸಿದರು. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂದು ಅವರು ನುಡಿದರು.

ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಎಲ್ಲ ಮಹನೀಯರನ್ನು ನೆನಪಿಸಿಕೊಂಡರು. 1980ರಲ್ಲಿ ಆರಂಭವಾದ ನಮ್ಮ ಪಕ್ಷದ ಪ್ರಯಾಣ ಜನರ ಆಶೀರ್ವಾದ ಮತ್ತು ನಿಮ್ಮ ಬೆಂಬಲದಿಂದ ಇವತ್ತು ಬಲಿಷ್ಠ ಮತ್ತು ಇಷ್ಟು ಎತ್ತರಕ್ಕೆ ಬೆಳೆದಿದೆ ಎಂದು ಅವರು ತಿಳಿಸಿದರು. ಜನರೇ ನಮ್ಮ ದೇವರು, ಜನಸೇವೆಯೇ ನಮ್ಮ ಕಾಯಕ. ಅವರ ಮುಂದೆ ನಾವು ನಮ್ರವಾಗಿ ಇರಬೇಕು ಎಂದು ಸೂಚಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ ಶ್ರಮ, ಅಡ್ವಾಣಿಯವರ ಸಂಘಟನಾ ಶಕ್ತಿ ಪ್ರತಿಯೊಬ್ಬ ಕಾರ್ಯಕರ್ತನ ಹೃದಯದಲ್ಲಿದೆ. ಪಕ್ಷದ ಬೆಳವಣಿಗೆಗೆ ಅನೇಕ ಮಹನೀಯರು ಶ್ರಮಿಸಿದ್ದಾರೆ ಎಂದು ವಿವರಿಸಿದರು. ಪಕ್ಷದ ಜಿಲ್ಲಾ ಪ್ರಮುಖರು, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago