ವಿಜಯಪುರ: ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಮಾಲೀಕ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಮಾಲೀಕ ಖೇಮು ಟಾಠೋಡ ಹಾಗೂ ಸಂಬಂಧಿಕರು ಮನ ಬಂದಂತೆ ಹಲ್ಲೆ ನಡೆಸಿದ್ದಾರೆ.
ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಕಾರ್ಮಿಕರು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಸಂಕ್ರಮಣದಂದು ಮನೆಗೆ ತೆರಳಿದ್ದ ಕಾರ್ಮಿಕರು ಮರಳಿ 16ರಂದು ಇಟ್ಟಿಗೆ ಭಟ್ಟಿಗೆ ಬಂದಿದ್ದರು. ಬಳಿಕ ಕಾರ್ಮಿಕರೆಲ್ಲರೂ ತಮ್ಮ ಸಾಮಾನುಗಳನ್ನು ಕೊಂಡೊಯ್ಯಲು ಮುಂದಾಗುತ್ತಿದ್ದರು ಎನ್ನಲಾಗಿದೆ.
ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಮಾಲೀಕ ಬೇರೆ ಕಡೆ ಕೆಲಸಕ್ಕೆ ಹೋಗುತ್ತಿರುವುದು ಯಾಕೆ ಎಂದು ಪ್ರಶ್ನಿಸಿ ಹಿಗ್ಗಾಮುಗ್ಗಾ ಹಲ್ಲೆ ಮಾಡಿಸಿದ್ದಾನೆ.
ಸದ್ಯ ಈ ಘಟನೆಯಿಂದ ಮಾಲೀಕನ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಾಲೀಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…
ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…